ಇದು ಗಜಪಡೆ ಸಾಮ್ರಾಜ್ಯ: ಆನೆಗಳ ದಿಂಡಿಗೆ ವಾಹನ ಸವಾರರು ಆತಂಕ!

ಚಾಮರಾಜನಗರ:- ಜಿಲ್ಲೆಯ ಹನೂರು ತಾಲ್ಲೂಕಿನ ಎಲ್ಲೆಮಾಳದ ಸಮೀಪ ಗಜಪಡೆ ರಸ್ತೆ ದಾಟಿದ್ದು, ಇದನ್ನು ನೋಡಿದ ಸಾರ್ವನಿಕರು ಆತಂಕಕ್ಕೊಳಗಾಗಿದ್ದಾರೆ.
ಇದರಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವಾಹನ ಸವಾರರು ನಿಂತಲ್ಲಿ ನಿಂತು ಆತಂಕಕ್ಕೆ ಒಳಗಾದರು. ಕೆಲವರು ಅಲ್ಲಿಂದ ಕಾಲ್ಕಿತ್ತರು. ಇನ್ನೂ ಕೆಲವರು ಮೊಬೈಲ್ನಲ್ಲಿ ಆ ಒಂದು ದೃಶ್ಯವನ್ನು ಸೆರೆ ಹಿಡಿದರು.
ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಕಾಡಾನೆಗಳು ಸಂಚಾರ ಹೆಚ್ಚಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ, ಕಾಡಾನೆಗಳು ಕಾಡಿನಿಂದ ಹೊರಬರದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






