ಇದೆಂಥಾ ದುಸ್ಥಿತಿ: ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಆರಂಭಕ್ಕೆ ವಿರೋಧ: ಕಣ್ಣೀರು ಹಾಕಿದ ಗವಿಸಿದ್ದೇಶ್ವರ ಶ್ರೀ!

ಫೆಬ್ರವರಿ 24, 2025 - 15:59
 0  17
ಇದೆಂಥಾ ದುಸ್ಥಿತಿ: ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಆರಂಭಕ್ಕೆ ವಿರೋಧ: ಕಣ್ಣೀರು ಹಾಕಿದ ಗವಿಸಿದ್ದೇಶ್ವರ ಶ್ರೀ!

ಕೊಪ್ಪಳ:- ಜಿಲ್ಲಾಕೇಂದ್ರದ ಸಮೀಪದಲ್ಲಿಯೇ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್  ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗುತ್ತಿದ್ದು, ಜನರಿಂದ ವಿರೋಧ ವ್ಯಕ್ತವಾಗಿದೆ. 

ಹೌದು, ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಆರಂಭಕ್ಕೆ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಇಂದಿನ ದುಸ್ಥಿತಿ ಕಂಡು ಗವಿಸಿದ್ದೇಶ್ವರ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ. 

ಹೌದು, ಕೊಪ್ಪಳ ನಗರಕ್ಕೆ ಹೊಂದಿಕೊಂಡು ಬಲ್ಡೋಟಾ ಸ್ಟೀಲ್ ಕಾರ್ಖಾನೆ  ಸ್ಥಾಪನೆಗೆ ವಿರೋಧಿಸಿ ಸೋಮವಾರ ಕೊಪ್ಪಳ ಬಂದ್ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಈ ಸಭೆಯಲ್ಲಿ ಕೊಪ್ಪಳದ ಸುಪ್ರಸಿದ್ಧ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ  ಕಣ್ಣೀರು ಹಾಕಿದ ಘಟನೆ ನಡೆಯಿತು.

ಸಭೆಯಲ್ಲಿ ಈಗಾಗಲೇ ಇರೋ ಅನೇಕ ಸ್ಟೀಲ್ ಪ್ಯಾಕ್ಟರಿಗಳಿಂದ ಸುತ್ತಮುತ್ತಲಿನ ಜನರ ಮೇಲೆ ಆಗುತ್ತಿರುವ ದುಷ್ಪರಿಣಾಮ ಬಗ್ಗೆ ವಿಡಿಯೋ ಪ್ರದರ್ಶನ ಮಾಡಲಾಯಿತು. ದೂಳು ಮತ್ತು ಹೊಗೆಯಿಂದ ಜನರು ಸಂಕಷ್ಟ ಪಡುತ್ತಿರುವ ದೃಶ್ಯಗಳನ್ನು ನೋಡುತ್ತಲೇ ಗವಿಮಠದ ಸ್ವಾಮೀಜಿ ಭಾವುಕರಾಗಿ ಕಣ್ಣೀರು ಹಾಕಿದರು.

ಬಳಿಕ ಸಭೆ ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಕೊಪ್ಪಳ ಸಾಂಸ್ಕೃತಿಕ ರಾಜಧಾನಿಯಾಗಿದೆ. ಆದರೆ, ಇದೀಗ ಕರಿ ಅರಳಿಯಂತಾಗಿದೆ. ಬಲ್ಡೋಟಾ ಸೇರಿದಂತೆ ಕೊಪ್ಪಳದಲ್ಲಿ ಯಾವುದೇ ಕಾರ್ಖಾನೆ ಆರಂಭಕ್ಕೆ ನನ್ನ ವಿರೋಧವಿದೆ ಎಂದು ಹೇಳಿದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow