ಇದೇ ಲಾಸ್ಟ್ ಶೋ: ಬಿಗ್ ಬಾಸ್ ತೊರೆಯುವ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬಿಗ್ ಬಾಸ್ ಶೋ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾಗಿದೆ. ಈಗಾಗಲೇ ನಿನ್ನೆಗೆ ಸೀಸನ್ 11 ಕೂಡ ಮುಕ್ತಾಯವಾಗಿದ್ದು, ವಿನ್ನರ್ ಸ್ಪರ್ಧಿ ಕೂಡ ಘೋಷಣೆಯಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11ರ ಫಿನಾಲೆ ಸುದೀಪ್ ಪಾಲಿಗೆ ತುಂಬಾನೇ ವಿಶೇಷ ಆಗಿತ್ತು. ಆದ್ದರಿಂದ ಅವರ ಕುಟುಂಬ ವೇದಿಕೆ ಮೇಲೆ ಆಗಮಿಸಿತ್ತು. ಸುದೀಪ್ ಅವರ ತಂದೆ ಸಂಜೀವ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ವೇದಿಕೆ ಮೇಲೆ ಬಂದಿದ್ದರು. ಅಲ್ಲದೆ, ಅವರ ಮಗಳು ಸಾನ್ವಿ ಕೂಡ ಆಗಮಮಿಸಿದ್ದು, ಇದು ಸುದೀಪ್ ಅವರಿಗೆ ದೊಡ್ಡ ಸರ್ಪೈಸ್ ಆಗಿತ್ತು.
ಇನ್ನೂ ಬಿಗ್ ಬಾಸ್ ಕನ್ನಡ ಸೀಸನ್ 11’ರ ವೇದಿಕೆ ಮೇಲೆ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ಬಗ್ಗೆಯಾಗಲೀ, ಇದೇ ತಮ್ಮ ಕೊನೆಯ ಸೀಸನ್ ಎಂಬುದಾಗಿ ಅವರು ಹೇಳಿಲ್ಲ. ಆದರೆ, ಅವರು ‘ಕಲರ್ಸ್ ಕನ್ನಡ’ಕ್ಕೆ ಹಾಗೂ ಮುಂದೆ ಬರುವ ಬಿಗ್ ಬಾಸ್ ಸೀಸನ್ಗಳನ್ನು ಬೆಂಬಲಿಸುವಂತೆ ಕೋರಿದ್ದಾರೆ
ಸುದೀಪ್ ಅವರು ಬಿಗ್ ಬಾಸ್ ಪೂರ್ಣಗೊಳ್ಳುವಾಗ ಎಲ್ಲರಿಗೂ ಧನ್ಯಾವಾದ ಹೇಳಿದ್ದಾರೆ. ತಮ್ಮ ಸಹಾಯಕ್ಕೆ ನಿಂತವರಿಗೆ ಹಾಗೂ ಶೋನ ಉತ್ತಮವಾಗಿ ಮೂಡಿ ಬರಲು ಕಾರಣ ಆದವರಿಗೆ ಸುದೀಪ್ ಧನ್ಯವಾದ ಹೇಳಿದ್ದಾರೆ. ‘119 ದಿನಗಳ ಜರ್ನಿಗೆ ಪೂರ್ಣ ವಿರಾಮ ಹಾಕುವ ಸಮಯ. ನನ್ನ ಸ್ಟಾಫ್ಗೆ ಧನ್ಯವಾದ. ಡಿಸೈನರ್ ಸಾಗರ್ಗೆ ಥ್ಯಾಂಕ್ಸ್’ ಎಂದರು ಸುದೀಪ್.
ಪ್ರತಿ ಬಾರಿ ವೇದಿಕೆಗೆ ಸ್ವಾಗತಿಸಿದ್ದಕ್ಕೆ ಥ್ಯಾಂಕ್ಸ್. ಬಿಗ್ ಬಾಸ್ ಕಾರ್ಯಕ್ರಮ ಹೀಗೆ ಚೆನ್ನಾಗಿ ಆಗಲಿ. ಮತ್ತೆ ಮುಂದಿನ ಬಿಗ್ ಬಾಸ್ ಸ್ಟಾರ್ಟ್ ಆಗೋವರೆಗೂ ನೀವೆಲ್ಲರೂ ಬೇರೆ ಕಾರ್ಯಕ್ರಮ ನೋಡಿ. ಬಿಗ್ ಬಾಸ್ಗೆ ನಿಮ್ಮ ಬೆಂಬಲ ಯಾವಾಗಲೂ ಇರಲಿ’ ಎಂದು ಸುದೀಪ್ ಅವರು ಕೋರಿದ್ದಾರೆ.
ಎಲ್ಲಾ ಸ್ಪರ್ಧಿಗಳು ಇದೇ ತಮ್ಮ ಕೊನೆಯ ಸೀಸನ್ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ವೀಕ್ಷಕರಿಗೆ ಸುದೀಪ್ ಮುಂದಿನ ವರ್ಷವೂ ಬರಬಹುದು ಎಂಬ ನಿರೀಕ್ಷೆ ಇದೆ
ನಿಮ್ಮ ಪ್ರತಿಕ್ರಿಯೆ ಏನು?






