ಇನ್ನುಂದೆ ಶಕ್ತಿ ಯೋಜನೆ ಸ್ಥಗಿತವಾಗುತ್ತಾ? ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ಅಕ್ಟೋಬರ್ 31, 2024 - 13:59
 0  14
ಇನ್ನುಂದೆ ಶಕ್ತಿ ಯೋಜನೆ ಸ್ಥಗಿತವಾಗುತ್ತಾ? ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಶಾಕಿಂಗ್ ಸ್ಟೇಟ್ ಮೆಂಟ್ ಕೊಟ್ಟಿದ್ದರು. ಇದು ಮಹಿಳೆಯರಿಗೆ ಕೊಂಚ ಬೇಸರ ತರಿಸಿತ್ತು. ನಿನ್ನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ DCM ಡಿಕೆಶಿ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದೆ ಎಂದಿದ್ದರು. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಇಂತಹ ವಿಚಾರ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ.

ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು. ಇನ್ನು ವಿಜಯಪುರ ಜಿಲ್ಲೆ ಬಿಟ್ಟು ಬೇರೆ ಬೇರೆ ಜಿಲ್ಲೆಗಳಲ್ಲಿ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿ, ಯಾವ ಜಿಲ್ಲೆಯಾದರೂ ಇರಲಿ ಬಿಡಿ. ಅವರು ನೋಟೀಸ್ ಕೊಟ್ಟಿರಲಿಲ್ವಾ? ಯಾಕೆ ಕೊಟ್ಟಿದ್ದರು ಅವರು.? ಅನೇಕ ಜಿಲ್ಲೆಗಳಲ್ಲಿ ಅವರೂ ನೋಟೀಸ್ ಕೊಟ್ಟಿದ್ದರು.

.4ರಂದು ಪ್ರತಿಭಟನೆ ಮಾಡ್ತಾ ಇರೋದು ರಾಜಕೀಯಕ್ಕಾಗಿ. ಬೈ ಎಲೆಕ್ಷನ್, ಹಾಗೂ ಮಹಾರಾಷ್ಟ್ರ ಚುನಾವಣೆಗಾಗಿ ರೀತಿ ಮಾಡ್ತಾ ಇದ್ದಾರೆ. ನೋಟೀಸ್ ಕೊಟ್ಟಿರೋದನ್ನ ವಾಪಸ್ ಪಡೀತಾ ಇದ್ದೀವಿ. ಬಿಜೆಪಿ ಇರೋದೇ ರಾಜಕೀಯಕ್ಕಾಗಿ ಬರೀ ಸುಳ್ಳೇ ಹೇಳೋದು. ಇಶ್ಯೂ ಇಲ್ಲದೇ ಹೋದ್ರೂ ಇಶ್ಯೂ ಮಾಡ್ತಾರೆ ಎಂದು ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow