ಇಷ್ಟು Costly ಫೋನ್ ಯಾಕಪ್ಪ ತಗೊಂಡೆ ಎಂದ ಅಪ್ಪ: ಇಷ್ಟಕ್ಕೆ ಸೂಸೈಡ್ ಮಾಡಿಕೊಂಡ ಮಗ!

ಬೆಳಗಾವಿ:- ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದೆ. ಅದರಂತೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ಐಫೋನ್ ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಮೃತ ಯುವಕ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳುವಳಿಕೆ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಮನೆಯ ರೂಮ್ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






