ಉಡುಪಿ DC ಕಚೇರಿಯಲ್ಲಿ ಶರಣಾದ ನಕ್ಸಲ್ ಲಕ್ಷ್ಮಿ ತೊಂಬಟ್ಟು!

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ರಡೂವರೆ ದಶಕದಿಂದ ಕಾಡೊಳಗೆ ಇದ್ದುಕೊಂಡೇ ಹೋರಾಟ ನಡೆಸುತ್ತಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು ಶರಣಾಗಿದ್ದರು. ಇಂದು ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಯಾಗಿದ್ದಾರೆ. ಹೌದು 2006ರಿಂದ ಕಣ್ಮರೆಯಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಉಡುಪಿಯಲ್ಲಿ ಶರಣಾಗಿದ್ದಾರೆ. ಲಕ್ಷ್ಮೀ ತಮ್ಮ ಊರಿನ ಅಭಿವೃದ್ಧಿಗೆ ಸರ್ಕಾರದ ನೆರವು ಕೋರಿದ್ದಾರೆ.
ಅವರ ವಿರುದ್ಧ ಅಮಾಸ್ಯೆಬೈಲು ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸರ್ಕಾರ ಶರಣಾಗತಿ ಪ್ಯಾಕೇಜ್ ಮತ್ತು ಪುನರ್ವಸತಿಯನ್ನು ಒದಗಿಸುವುದಾಗಿ ಭರವಸೆ ನೀಡಿದೆ. ಲಕ್ಷ್ಮೀಯ ಪತಿ ಸಂಜೀವ ಕೂಡ ನಕ್ಸಲ್ ಆಗಿದ್ದು, ಮುಖ್ಯವಾಹನಿಗೆ ಬಂದಿದ್ದಾರೆ.
2006 ಮಾರ್ಚ್ 6 ರಿಂದ ಕಣ್ಮರೆಯಾಗಿದ್ದ ಲಕ್ಷ್ಮೀ, ನಕ್ಸಲ್ ಚಳುವಳಿಯಲ್ಲಿ ಭಾಗಿಯಾಗಿ ವಾರಾಹಿ ಮತ್ತು ಕರಾವಳಿ ದಳದಲ್ಲಿ ಗುರುತಿಸಿಕೊಂಡಿದ್ದಳು. ಗ್ರಾಮದ ರಸ್ತೆ ಸಮಸ್ಯೆ, ಸಾರಾಯಿ ಅಂಗಡಿ ವಿರುದ್ಧ ಹೋರಾಟಗಳಲ್ಲಿ ಭಾಗಿಯಾಗಿ ಸಾಮಾಜಿಕವಾಗಿ ಗುರುತಿಸಿಕೊಂಡು, ನಕ್ಸಲ್ ಚಳುವಳಿಯಿಂದ ಆಕರ್ಷಿತಳಾಗಿದ್ದಳು.
ನಿಮ್ಮ ಪ್ರತಿಕ್ರಿಯೆ ಏನು?






