ಉತ್ತರಾಖಂಡದ ಮಾಜಿ ಸಿಎಂ ಪುತ್ರಿಗೆ ವಂಚಕರಿಂದ ಪಂಗನಾಮ!

ಫೆಬ್ರವರಿ 9, 2025 - 16:02
 0  9
ಉತ್ತರಾಖಂಡದ ಮಾಜಿ ಸಿಎಂ ಪುತ್ರಿಗೆ ವಂಚಕರಿಂದ ಪಂಗನಾಮ!

ಇತ್ತೀಚಿನ ದಿನಗಳಲ್ಲಿ ವಂಚಕರ ಜಾಲಾ ಎಲ್ಲೆಡೆ ಹಬ್ಬಿದೆ. ಸಾಮಾನ್ಯ ಜನರಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೂಡ ಇವರ ವಂಚನೆಗೆ ಬಲಿ ಆಗುತ್ತಿದ್ದಾರೆ. ಅದರಂತೆ ಉತ್ತರಾಖಂಡದ ಮಾಜಿ ಸಿಎಂ ಪುತ್ರಿಗೆ ವಂಚಕರಿಂದ ಪಂಗನಾಮ ಹಾಕಿರುವ ಘಟನೆ ಜರುಗಿದೆ. 

ಹೌದು, ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ಪಂಗನಾಮ ಹಾಕಿದ್ದಾರೆ. ನಟಿ ಆರುಷಿ ನಿಶಾಂಕ್ ಡೆಹ್ರಾಡೂನ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. 

ಮಾನ್ಸಿ ಹಾಗೂ ವರುಣ್ ಬಾಂಗ್ಲಾ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ ಎಂದು ಆರುಷಿ ನಿಶಾಂಕ್ ಆರೋಪಿಸಿದ್ದಾರೆ. ತಮ್ಮ ನಿವಾಸಕ್ಕೆ ವರುಣ್ ದಂಪತಿ ಬಂದು ‘ಅಂಯೋಂ ಕಿ ಗುಸ್ತಾಖಿಯಾನ್’ ಚಿತ್ರದಲ್ಲಿ ಪಾತ್ರ ನೀಡೋದಾಗಿ ಹೇಳಿದ್ದರು. ಅದಕ್ಕಾಗಿ 5 ಕೋಟಿ ರೂ. ತಮಗೆ ಕೇಳಿದ್ದರು. ಚಿತ್ರ ರಿಲೀಸ್ ಆದ್ಮೇಲೆ ಬಂದ ಲಾಭದಲ್ಲಿ 20% ಸೇರಿ 15 ಕೋಟಿ ರೂ. ಕೊಡೋದಾಗಿ ಭರವಸೆ ನೀಡಿದ್ದರು. ಬಳಿಕ ತನ್ನಿಂದ ಸಿನಿಮಾಗೆ 4 ಕೋಟಿ ರೂ. ಹೂಡಿಕೆ ಮಾಡಿಸಿದ್ದರು. ಇದಕ್ಕೆ ಆರುಷಿ ಕೂಡ ಒಪ್ಪಿಕೊಂಡು 4 ಕಂತುಗಳಲ್ಲಿ 4 ಕೋಟಿ ರೂ. ನೀಡಿರೋದಾಗಿ ತಿಳಿಸಿದ್ದರು.

ನನ್ನ ಸ್ಕ್ರೀಪ್ಟ್ ಅನ್ನು ತಾವೇ ಫೈನಲ್ ಮಾಡುವುದಕ್ಕೂ ಅವಕಾಶವಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಮೋಟ್ ಮಾಡಲು ಅವಕಾಶ ನೀಡುವುದಾಗಿ ಹೇಳಿದ್ದರು. ಇನ್ನೂ ಈ ವರ್ಷ ಫೆಬ್ರವರಿ 2ರಂದು ಭಾರತದಲ್ಲಿ ಆಗಬೇಕಾದ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಲಾಗಿದ್ದು, ಉಳಿದ ಭಾಗವನ್ನು ಯುರೋಪಿನಲ್ಲಿ ಚಿತ್ರೀಕರಿಸುವ ಪ್ಲ್ಯಾನ್ ಮಾಡಲಾಗಿದೆ. ಆದ್ರೆ ನನ್ನನ್ನು ಆಯ್ಕೆ ಮಾಡಿದ್ದ ಸ್ಥಾನದಲ್ಲಿ ಬೇರೆ ನಟಿಯನ್ನು ಆಯ್ಕೆ ಮಾಡಲಾಗಿದೆ ಎಂದು ನಟಿ ಆರೋಪಿಸಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow