ಉದಯಗಿರಿ ಕಲ್ಲು ತೂರಾಟ ಪ್ರಕರಣ: 11 ದಿನಗಳ ಬಳಿಕ ಪ್ರಚೋದನೆ ನೀಡಿದ್ದ ಮೌಲ್ವಿ ಅರೆಸ್ಟ್

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಾಟೆ, ರಾಜಕೀಯವಾಗಿ ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪ ಜೋರಾಗಿತ್ತು. ಇದೀಗ ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ.
ಹೌದು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೇ ಇರುವ ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






