ಉಪ ಚುನಾವಣೆ: ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ - ಹೆಚ್.ವಿಶ್ವನಾಥ್

ನವೆಂಬರ್ 23, 2024 - 17:18
 0  16
ಉಪ ಚುನಾವಣೆ: ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ - ಹೆಚ್.ವಿಶ್ವನಾಥ್

ಮೈಸೂರು: ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್‌ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಿದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ. ಈ ತೀರ್ಪಿನಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ, ಗೆದ್ದವರು ಬೀಗುವ ಅಗತ್ಯವೂ ಇಲ್ಲ ಎಂದು ತಿವಿದಿದ್ದಾರೆ.

ಹಣ, ಹೆಂಡ, ಶಿಫಾರಸ್ಸು ಇಂತಹದರ ಮೇಲೆಯೆ ಚುನಾವಣೆ ನಡೆಯುವುದು. ಚುನಾವಣೆಯೂ ಅದೇ ರೀತಿ ನಡೆದಿದೆ. ಮುಡಾ ಹಗರಣ ಮೈಸೂರು ವ್ಯಾಪ್ತಿಯದ್ದು, ಹೀಗಾಗಿ ಅದು ಚನ್ನಪಟ್ಟಣದಲ್ಲಿ ವರ್ಕ್ ಆಗುತ್ತೆ ಅಂದುಕೊಳ್ಳುವುದು ಬೇಡ. ಸಿದ್ದರಾಮಯ್ಯ ಸರ್ಕಾರಕ್ಕೆ ಜನಕೊಟ್ಟ ತೀರ್ಪು ಇದಲ್ಲ. ಉಪಚುನಾವಣೆಗಳು ಯಾವ ರೀತಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow