ಎಲ್ಲೆಂದರಲ್ಲಿ ಗುಟ್ಕಾ ತಿಂದು ಉಗುಳುವವರಿಗೆ ಬುದ್ಧಿ ಕಲಿಸಲು ನಿತಿನ್ ಗಡ್ಕರಿ ಕೊಟ್ರೂ ಬಂಪರ್ ಪ್ಲ್ಯಾನ್!

ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರಿಗೆ ಬುದ್ದಿ ಕಲಿಸಲು ನಿತಿನ್ ಗಡ್ಕರಿ ಮಾಸ್ಟರ್ ಪ್ಲ್ಯಾನ್ ಹೇಳಿದ್ದಾರೆ.
ಗಾಂಧಿ ಜಯಂತಿಯಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ ಸ್ವಚ್ಛ ಭಾರತ್ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡಿದ್ದಾರೆ.
ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರ ಫೋಟೋ ತೆಗೆದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಬೇಕು ಎಂದು ಗಡ್ಕರಿ ಸಲಹೆ ನೀಡಿದ್ದಾರೆ.
ನಮ್ಮ ದೇಶದ ಜನ ತುಂಬಾ ಬುದ್ಧಿವಂತರು. ಚಾಕಲೇಟ್ ತಿಂದು ಅದರ ಕವರನ್ನು ರಸ್ತೆಗೆ ಎಸೆಯುತ್ತಾರೆ. ಅದೇ ವ್ಯಕ್ತಿ ವಿದೇಶಕ್ಕೆ ಹೋದಾಗ ಜೇಬಿನಲ್ಲಿ ಚಾಕಲೇಟ್ ಕವರ್ ಇಟ್ಟುಕೊಂಡು ವಿದೇಶದಲ್ಲಿ ಚೆನ್ನಾಗಿ ವರ್ತಿಸುತ್ತಾರೆ. ಆದರೆ, ಇಲ್ಲಿ ಮಾತ್ರ ಕಸವನ್ನು ರಸ್ತೆಗೆ ಎಸೆಯುತ್ತಾರೆ ಎಂದಿದ್ದಾರೆ.
ಈ ವೇಳೆ ತಮ್ಮ ಬಗ್ಗೆಯೂ ಹೇಳಿಕೊಂಡ ಅವರು, ಮೊದಲೆಲ್ಲ ನಾನು ಚಾಕಲೇಟ್ ತಿಂದಾಗ ರಸ್ತೆಯಲ್ಲೇ ಕವರ್ ಬಿಸಾಡುತ್ತಿದ್ದೆ. ಆದರೆ, ಈಗ ಚಾಕಲೇಟ್ ತಿಂದಾಗಲೆಲ್ಲ ಆ ಕವರ್ ಅನ್ನು ಮನೆಗೆ ತೆಗೆದುಕೊಂಡು ಹೋಗಿ ಬಿಸಾಡುತ್ತೇನೆ ಎಂದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






