ಓಂ ಪ್ರಕಾಶ್ ಬರ್ಬರ ಹತ್ಯೆ ಕೇಸ್: ತಾಯಿ-ಮಗಳು ಅರೆಸ್ಟ್.! ಕೊಲೆಯ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆಯಾಗಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಓಂ ಪ್ರಕಾಶ ಅವರನ್ನು ಅವರ ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಹತ್ಯೆ ಪ್ರಕರಣದಲ್ಲಿ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೂ ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ. ಇಂದು ಓ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






