'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಲೇಡಿ ಬ್ಯಾಂಕ್ ಮ್ಯಾನೇಜರ್ ದರ್ಪ!

ಆನೇಕಲ್: ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕೆನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಆಗಾಗ ಜಗಳಗಳು, ಗಲಾಟೆಗಳು ನಡೆಯುತ್ತಲೇ ಇರುತ್ತದೆ. ಇದೀಗ ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ತಾಲೂಕಿನ ಸೂರ್ಯನಗರದ ಎಸ್ಬಿಐ ಬ್ಯಾಂಕ್ನ ಮ್ಯಾನೇಜರ್ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಒಬ್ಬರು, ಕನ್ನಡ ಮಾತನಾಡಲ್ಲ, ಇದು ಇಂಡಿಯಾ. ನಾನು ಹಿಂದಿಯನ್ನೇ ಮಾತನಾಡುವುದು ಎಂದು ಉಡಾಫೆಯಾಗಿ ಮಾತನಾಡಿದ್ದಾರೆ. ಮಾತ್ರವಲ್ಲ, ನಾನೆಂದಿಗೂ ಕನ್ನಡ ಮಾತನಾಡಲ್ಲ ಎಂದು ಕನ್ನಡಿಗರನ್ನು ಕೆರಳಿಸುವಂತೆ ಪ್ರತಿಕ್ರಿಯೆ ನೀಡಿರುವ ವಿಡಿಯೋ ಒಂದು ಎಕ್ಸ್ನಲ್ಲಿ ವೈರಲ್ ಆಗಿದೆ. ಕನ್ನಡಿಗರು ಈ ವಿಡಿಯೋ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಚಂದಾಪುರದ ಸೂರ್ಯಸಿಟಿಯ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡ ಮಾತಾಡಲ್ಲ ಎಂದು ಊಡಾಫೆ ವರ್ತನೆ ತೋರಿದ್ದಾರೆ. ಕನ್ನಡಿಗರನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಕನ್ನಡ ಮಾತಾಡು ಎಂದ ಗ್ರಾಹಕನಿಗೆ ಹಿಂದಿ ಮಾತಾಡ್ತೇನೆ, ನಾನು ಕನ್ನಡ ಮಾತನಾಡಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇದು ಇಂಡಿಯಾ ನಾನು ಹಿಂದಿಯನ್ನೇ ಮಾತನಾಡುತ್ತೇನೆ ಎಂದು ಬ್ಯಾಂಕ್ ಮ್ಯಾನೇಜರ್ ಉಡಾಫೆಯಾಗಿ ಮಾತನಾಡಿರುವ ವಿಡಿಯೋವನ್ನು ಗ್ರಾಹಕರು ಚಿತ್ರೀಕರಿಸಿ ಅದನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






