ಕನ್ನಡಿಗರಿಗೆ ಕನ್ನಡತಿಯಿಂದ ಸಿಕ್ತು ಗುಡ್ ನ್ಯೂಸ್: ರಂಜನಿ ರಾಘವನ್ ಕೊಟ್ಟ ಸಿಹಿ ಸುದ್ದಿ ಏನು?

ಜನವರಿ 2, 2025 - 21:02
 0  5
ಕನ್ನಡಿಗರಿಗೆ ಕನ್ನಡತಿಯಿಂದ ಸಿಕ್ತು ಗುಡ್ ನ್ಯೂಸ್: ರಂಜನಿ ರಾಘವನ್ ಕೊಟ್ಟ ಸಿಹಿ ಸುದ್ದಿ ಏನು?

ಕಲರ್ಸ್ ಕನ್ನಡದಲ್ಲಿ ಈ ಹಿಂದೆ ಪ್ರಸಾರವಾಗುತ್ತಿದ್ದ ಕನ್ನಡತಿ ಸೀರಿಯಲ್ ವೀಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿತ್ತು. ಕಥೆ, ಕಲಾವಿದರ ನ್ಯಾಚುರಲ್ ಆ್ಯಕ್ಟಿಂಗ್ ಸಾಕಷ್ಟು ಜನರ ಮನಗೆದ್ದಿತ್ತು. ಕನ್ನಡತಿ ಧಾರಾವಾಹಿಯಲ್ಲಿ ಭುವಿ ಪಾತ್ರ ನಿಭಾಯಿಸಿದ್ದ ರಂಜನಿ ಅವರಿಗೆ ಸಾಕಷ್ಟು ಅಭಿಮಾನಿಗಳ ಬಳಗ ಇದೆ.

ಕನ್ನಡತಿ ಧಾರಾವಾಹಿ ಮುಕ್ತಾಯದ ನಂತರ ರಂಜನಿ ರಾಘವನ್ ಒಂದು ಲಾಂಗ್ ಬ್ರೇಕ್ ತೆಗೆದುಕೊಂಡಿದ್ದರು. ಸಿನಿಮಾ ಸೇರಿದಂತೆ ಬೇರೆ ಬೇರೆ ಕೆಲಸದಲ್ಲಿ ಬ್ಯುಸಿಯಾಗಿದ್ದ ನಟಿ ರಂಜನಿ ರಾಘವನ್ ಇದೀಗ ಅಭಿಮಾನಿಗಳಿಗೆ ಮತ್ತೊಂದು ಶುಭ ಸುದ್ದಿ ಕೊಟ್ಟಿದ್ದಾರೆ.

ಸೀರಿಯಲ್​, ಸಿನಿಮಾ, ಬರವಣಿಗೆಯ ನಂತರ ನಿರ್ದೇಶನದತ್ತ ಮುಖ ಮಾಡಿದ್ದಾರೆ ಸ್ಟಾರ್​ ನಟಿ ರಂಜನಿ ರಾಘವನ್. ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್‌ಗಳ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಟಿ ರಂಜನಿ ರಾಘವನ್ ನಿರ್ದೇಶನದತ್ತ ಮುಖ ಮಾಡಿರೋದು ಅಭಿಮಾನಿಗಳಿಗೆ ಖುಷಿ ತಂದಿದೆ. ಅದರಲ್ಲೂ ನಟಿಯ ಚೊಚ್ಚಲ ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಸಂಯೋಜನೆಯಲ್ಲಿ ಮ್ಯೂಸಿಕ್ ಬರಲಿದೆ.

ಹೊಸ ವರ್ಷದಂದು ನಿರ್ದೇಶನ ಮಾಡುತ್ತಿರುವ ಬಗ್ಗೆ ಅಭಿಮಾನಿಗಳೊಂದಿಗೆ ಈ ಖುಷಿಯನ್ನು ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಜೊತೆಗೆ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ. ಹೊಸ ಕೆಲಸ ಅನ್ನುವುದಕ್ಕಿಂತ ಸಿನಿಮಾ ನಿರ್ದೇಶಕಿ ಆಗಬೇಕೆಂಬ ಕನಸು ಹೊತ್ತು ಬಹಳ ವರ್ಷಗಳೇ ಸರಿದಿದೆ. ಈ ಕತೆ ಹುಟ್ಟಿ ಎರಡು ವರ್ಷಗಳಾಗಿವೆ. ಒಂದೂವರೆ ವರ್ಷದಿಂದ ಇದರ ಚಿತ್ರಕತೆಯನ್ನ ಬರೆದು ತಿದ್ದಿದ್ದೇನೆ. 

ಚಿತ್ರರಂಗದ ಹಲವಾರು ಜನರ ಸಹಾಯ ಪ್ರೋತ್ಸಾಹದಿಂದ, ನಮ್ಮ ನಿರ್ಮಾಪಕರಾದ ಡಾ.ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಅವರ ಸಹಕಾರದಿಂದ ನಮ್ಮ ಸಿನಿಮಾ ಬಗ್ಗೆ ಮಾತನಾಡುವ ಧೈರ್ಯ ಬಂದಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಕನ್ನಡ ಕಿರುತೆರೆಯ ಜನ ಮೆಚ್ಚಿದ ಸೀರಿಯಲ್​ ಎಂದರೆ ಅದು ಕನ್ನಡತಿ. ಈ ಸೀರಿಯಲ್​​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರೋ ನಟಿ ರಂಜನಿ ರಾಘವನ್ ಎಲ್ಲರಿಗೂ ಅಚ್ಚುಮೆಚ್ಚು. ಕನ್ನಡತಿ ಧಾರಾವಾಹಿಯಲ್ಲಿ ಭುವಿ ಪಾತ್ರ ನಿಭಾಯಿಸಿದ್ದ ರಂಜನಿ ಅವರಿಗೆ ಸಾಕಷ್ಟು ಅಭಿಮಾನಿಗಳ ಬಳಗ ಇದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow