ಕನ್ನಡಿಗರೇ ಇಲ್ಲಿ ಕೇಳಿ: ಬಂಪರ್ ಸುದ್ದಿ ನಿಮಗಾಗಿ, ಇನ್ಮುಂದೆ ಕನ್ನಡದಲ್ಲೇ ನಡೆಯಲಿದೆ ರೈಲ್ವೆ ಎಕ್ಸಾಂ!

ಕನ್ನಡಿಗರಿಗೆ ಕೇಂದ್ರ ಸಚಿವ ವಿ ಸೋಮಣ್ಣ ಗುಡ್ನ್ಯೂಸ್ ಕೊಟ್ಟಿದ್ದಾರೆ. ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತಾಡಿದ ವಿ. ಸೋಮಣ್ಣ ಅವರು, ಇನ್ನು ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿವೆ. ಸುಮಾರು 15 ಲಕ್ಷ ಜನ ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿಯಿರೋ 16,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದೇನೆ. ಈ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಆದೇಶ ನೀಡಲಾಗಿದೆ ಎಂದರು.
ಕನ್ನಡಿಗರು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಇದಕ್ಕೆ ಅಗತ್ಯವಿರೋ ಬೇಕಾದಷ್ಟು ಪುಸ್ತಕಗಳು ಸಿಗುತ್ತವೆ. ಎಲ್ಲರೂ ಉಪಯೋಗ ಮಾಡಿಕೊಳ್ಳಿ. ಮುಂದೆ ಇನ್ನೂ ಖಾಲಿ ಇರುವ 46,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






