ಕರಿಯ ಕುಮಾರಸ್ವಾಮಿ ಬಿಜೆಪಿಗಿಂತ ಡೇಂಜರ್: HDK ವಿರುದ್ಧ ಏಕವಚನದಲ್ಲೇ ನಾಲಗೆ ಹರಿಬಿಟ್ಟ ಜಮೀರ್

ರಾಮನಗರ: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಯ ರಣಕಣದ ಹೋರಾಟ ಕೊನೆಯ ಹಂತಕ್ಕೆ ಬಂದು ನಿಂತಿದೆ, ಕಳೆದ 10 ದಿನಗಳಿಂದ ನಡೆಯುತ್ತಿದ್ದ ಘಟಾನುಘಟಿ ನಾಯಕರ ಅದ್ದೂರಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ಇದರ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಮತಯಾಚನೆ ವೇಳೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿ ಪಿ ಯೋಗೇಶ್ವರ್ ನಮ್ಮ ಪಾರ್ಟಿಯಿಂದ ರಾಜಕೀಯ ಪ್ರಾರಂಭ ಮಾಡಿದ್ರು, ಕೆಲವು ವ್ಯತ್ಯಾಸಗಳಾಗಿ ಬಿಜೆಪಿ ಹೋದ್ರು ಜೆಡಿಎಸ್ ಹೋಗಬೇಕು ಅಂತಿದ್ರೂ ಆದ್ರೆ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ ಎಂದು ಹೇಳಿದ್ರು.
ಇದೇ ವೇಳೆ ಈ ಹಿಂದೆ ಮುಸಲ್ಮಾನರ ವೋಟು ಬೇಡ, ನಾನು ಅವರ ಬಳಿ ಮತ ಕೇಳೋಕೆ ಹೋಗಲ್ಲ. ಹಿಜಾಬ್ ಬಗ್ಗೆ ಮಾತನಾಡಲ್ಲ ಎಂದೆಲ್ಲ ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾದ ಹಳೇ ವಿಡಿಯೋಗಳನ್ನು ಪ್ಲೇ ಮಾಡಿ ಜನರಿಗೆ ಕೇಳಿಸುವ ಮೂಲಕ ನಿಖಿಲ್ ಕುಮಾರಸ್ವಾಮಿಗೆ ಮತ ನೀಡಬೇಡಿ ಎಂದು ಹೇಳಿದ್ರು.
‘ಹಿಂದೆ ಹಿಜಾಬ್ ಬೇಡೆ ಪಜಾಬ್ ಬೇಡ ಅಂದಿದ್ದೀಯಾ, ಈಗ ನಿನಗೆ ಮುಸಲ್ಮಾನರ ಓಟ್ ಬೇಕಾ? ಏ ಕುಮಾರಸ್ವಾಮಿ ನಿನ್ನ ರೇಟ್ ಹೇಳು, ಮುಸಲ್ಮಾನರು ಒಂದೊಂದು ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ. ಈ ಕುಮಾರಸ್ವಾಮಿ ಬಿಜೆಪಿ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂ ಖರೀದಿ ಮಾಡ್ತೇನೆ ಎಂದು ಹೆಚ್ಡಿಕೆಗೆ ಸವಾಲು ಹಾಕಿದ್ರು’. ಅಲ್ಲದೆ ಕುಮಾರಸ್ವಾಮಿ ಅವರ ಬಣ್ಣದ ಕುರಿತೂ ಮಾತನಾಡಿ ಜನಾಗೀಯವಾಗಿ ನಿಂಧಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






