ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ!

ಸೆಪ್ಟೆಂಬರ್ 19, 2024 - 11:57
 0  16
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ!

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 84 ವರ್ಷದ ಗುತ್ತಿಗೆದಾರ ಕೆಂಪಣ್ಣ ವಿಧಿವಶರಾಗಿದ್ದಾರೆ.  ಇಂದು ಬೆಳಗ್ಗೆ 10 ಗಂಟೆ ತಮ್ಮ ಸ್ವಗೃಹದಲ್ಲೇ  ಕೆಂಪಣ್ಣ ವಿಧಿವಶರಾಗಿದ್ದಾರೆ. ಕೆಂಪಣ್ಣ ಅವರು, ವಿಪರೀತ ಮಧುಮೇಹದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು. 

ಇದು ಬಹಳ ರಾಜಕೀಯ ಸ್ಥಿತ್ಯಂರಕ್ಕೆ ದಾರಿ ಮಾಡಿ ಕೊಟ್ಟಿತ್ತು. ಕಳೆದ ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲಿದ್ದರು ಎಂದು ಹೇಳಲಾಗುತ್ತಿದೆ. ಇದೀಗ ಅವರ ವಿಧಿವಶದ ವಿಷಯ ಕೇಳಿ ಸಾಕಷ್ಟು ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow