ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ

ಸೆಪ್ಟೆಂಬರ್ 10, 2024 - 15:06
 0  10
ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ
FOCUS KARNATAKA Vandhe Bharath Train

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.

ವಂದೇ ಭಾರತ್ ಎಕ್ಸ್​​ಪ್ರೆಸ್ ವಿಚಾರವಾಗಿ ಎರಡು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೊಂದಿಗೆ ಸಭೆ ನಡೆಸಿರುವುದಾಗಿ ಶೆಟ್ಟರ್ ತಿಳಿಸಿದ್ದಾರೆ.

ಬೆಂಗಳೂರು ಧಾರವಾಡ ವಂದೇ ಭಾರತ್ ಅನ್ನು ಬೆಳಗಾವಿಯವರೆಗೆ ವಿಸ್ತರಿಸಲು ಮನವಿ ಮಾಡಿದ್ದೇನೆ. ಇದೀಗ ಪುಣೆ-ಹುಬ್ಬಳ್ಳಿ ಬೇಡಿಕೆ ಈಡೇರಿದ್ದು, ಶೀಘ್ರದಲ್ಲೇ ಬೆಂಗಳೂರು-ಧಾರವಾಡ ವಂದೇ ಭಾರತ್ ಬೆಳಗಾವಿವರೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗದ ಪ್ರಕ್ರಿಯೆ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕಾಮಗಾರಿ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕರ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ಅಧಿಕಾರ ಸ್ವೀಕರಿಸಿದ ಆರಂಭದಿಂದಲೂ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಚ್ಚಾಟ ನಡೆದಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳ ಶುರುವಾಗಿದ್ದು, ಶೀಘ್ರದಲ್ಲೇ ಅದು ಸ್ಫೋಟಗೊಳ್ಳಲಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕಾಂಕ್ಷಿಯಾಗಿದ್ದರು, ಆದರೆ ಈಗ ಇನ್ನೂ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ಥಿರವಾಗಿದೆ ಮತ್ತು ಶೀಘ್ರದಲ್ಲೇ ಪತನವಾಗಬಹುದು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣಗಳು ಮುನ್ನೆಲೆಗೆ ಬಂದಿವೆ. ಇಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಮತ್ತು ಆಡಳಿತದ ಮೇಲೆ ನಿಯಂತ್ರಣವಿಲ್ಲ ಎಂದು ಶೆಟ್ಟರ್ ಟೀಕಿಸಿದರು.

‘ಎಸ್‌ಪಿಎಂ ರಸ್ತೆಯಿಂದ ಹಳೆ ಪಿಬಿ ರಸ್ತೆವರೆಗಿನ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡಿರುವ ಲೋಪದಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಅವ್ಯವಸ್ಥೆಗೆ ಸಿಲುಕಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ತಡೆಗೆ 20 ಕೋಟಿ ರೂ. ಶೆಟ್ಟರ್ ಹೇಳಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow