ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್..! ಯಾಕೆ ಈ ಪ್ರದೇಶಗಳಲ್ಲೇ ಯುದ್ಧ ಕವಾಯತು..!?

ಮೇ 6, 2025 - 16:09
 0  13
ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್..! ಯಾಕೆ ಈ ಪ್ರದೇಶಗಳಲ್ಲೇ ಯುದ್ಧ ಕವಾಯತು..!?

ಬೆಂಗಳೂರ: ಭಾರತ – ಪಾಕಿಸ್ತಾನ ಎರಡೂ ದೇಶಗಳು ಯುದ್ಧದ ತಯಾರಿಯಲ್ಲಿವೆ. ಗಡಿಯಲ್ಲಿ ಮಿಲಿಟರಿ ಹಾಗೂ ಭದ್ರತಾ ಚಟುವಟಿಕೆಗಳನ್ನು ಗಮನಿಸಿದರೆ ಯುದ್ಧ ನಡೆಯೋದು ಪಕ್ಕಾ ಎನ್ನಲಾಗುತ್ತಿದೆ. ಕಾಲು ಕೆದರಿ ಬರುವ ಪಾಕಿಸ್ತಾನ, ಗಡಿಯಲ್ಲಿ ತನ್ನ ಅಪ್ರಚೋದಿತ ಗುಂಡಿನ ದಾಳಿಯನ್ನ ನಡೆಸುತ್ತಲೇ ಇದೆ. ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್‌ ಮೊಳಗಲಿದೆ. ಬೆಂಗಳೂರು ಮತ್ತು ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಇರುವ ರಾಯಚೂರಿನ ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ.

ಮಾಕ್‌ ಡ್ರಿಲ್‌ನಲ್ಲಿ ಒಂದು ಕಾಲ್ಪನಿಕ ತುರ್ತು ಪರಿಸ್ಥಿತಿಯ ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಭದ್ರತಾ ಸಿಬ್ಬಂದಿ, ಸಾರ್ವಜನಿಕರ ಸಿದ್ಧತೆ ಪರೀಕ್ಷಿಸುವ ಅಭ್ಯಾಸ ಇದಾಗಿದ್ದು ನೈಜ ಘಟನೆಯಂತೆಯೇ ನಡೆಯುತ್ತದೆ. ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಸಂಕಷ್ಟದ ಸನ್ನಿವೇಶಗಳನ್ನು ಅಣಕುಪ್ರದರ್ಶನ ಮಾಡಿ ಅಭ್ಯಾಸ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆಯ ಸಾಮರ್ಥ್ಯ ಬಲಪಡಿಸುವ ಉದ್ದೇಶದ ಜೊತೆಗೆ ಶತ್ರು ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿ ಪಡಿಸಲು ಅಗತ್ಯ ಸಿದ್ಧತೆ ಮಾಡಲು ಈ ಅಭ್ಯಾಸ ಮಾಡಲಾಗುತ್ತದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow