ಕರ್ನಾಟಕದ ಕುಂಭ ಮೇಳಕ್ಕೆ ಕೌಂಟ್ ಡೌನ್: ಯಾವಾಗ, ಎಲ್ಲಿ? ಇಲ್ಲಿದೆ ಡೀಟೈಲ್ಸ್!

ಮೈಸೂರು:- ಕರ್ನಾಟಕದ ಕುಂಭ ಮೇಳಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆಯಿಂದ ಆರಂಭವಾಗಲಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ.
ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ ಮಹದೇವಪ್ಪ ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಆದಿ ಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸೇರಿ ಹಲವರು ಭಾಗಿಯಾಗಲಿದ್ದಾರೆ.
ದಕ್ಷಿಣದ ಪವಿತ್ರ ನದಿಗಳಾದ ಕಾವೇರಿ, ಕಪಿಲಾ ಮತ್ತು ಸ್ಫಟಿಕ ಸರೋವರ ಸಂಗಮವಾದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮಾಘಮಾಸದ ಪುಣ್ಯಸ್ನಾನಕ್ಕೆ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಇನ್ನು ಭಕ್ತಾದಿಗಳಿಗೆ ಮೂಲಸೌಕರ್ಯ ಸೇರಿ ಹಲವು ವ್ಯವಸ್ಥೆ ಕೂಡ ಮಾಡಲಾಗಿದೆ.
ಕುಂಭಮೇಳ ಹಿನ್ನೆಲೆ ಈಗಾಗಲೇ ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗೆ ನಿರ್ಮಲಾನಂದನಾಥ ಶ್ರೀಗಳು ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದ್ದರು. ಬಳಿಕ ಅಧಿಕಾರಿಗಳ ಜೊತೆಗೆ ಸಭೆ ಮಾಡಿ, ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಲು ಸಲಹೆ ನೀಡಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






