ಕಲ್ಯಾಣಿಯಲ್ಲಿ ಈಜಲು ಹೋಗಿ ಅವಘಡ: ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು!

ಫೆಬ್ರವರಿ 9, 2025 - 11:50
 0  10
ಕಲ್ಯಾಣಿಯಲ್ಲಿ ಈಜಲು ಹೋಗಿ ಅವಘಡ: ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು!

ಬೆಂಗಳೂರು:- ಕಲ್ಯಾಣಿಯಲ್ಲಿ ಈಜಲು ಹೋಗಿ ಅವಘಡ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಜರುಗಿದೆ. 

ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿಗೆ ತೆರಳಿದ್ದಾರೆ. ಬಳಿಕ ಕಲ್ಯಾಣಿಗೆ ಈಜಲು ಇಳಿದಿದ್ದಾರೆ. ಈ ಪೈಕಿ ದೀಪು, ಯೋಗೇಶ್ವರ್ಗೆ ಈಜಲು ಆಗದೆ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ್ದಾರೆ. ಇತ್ತ ರಕ್ಷಣೆ ಮಾಡಲು ಸಾಧ್ಯವಾಗದೆ ಉಳಿದ ಸ್ನೇಹಿತರು ಕಂಗಾಲಾಗಿದ್ದಾರೆ.

ಈಜಲು ಬಾರದೆ ಒಬ್ಬರಾದ ಮೇಲೆ ಒಬ್ಬರಂತೆ ಇಬ್ಬರು ಸ್ನೇಹಿತರು ಇನ್ನುಳಿದ ಸ್ನೇಹಿತರ ಕಣ್ಣೆದುರೇ ಮುಳುಗಿ ಪ್ರಾಣಬಿಟ್ಟಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow