ಕಳೆದ ಒಂದೇ ವರ್ಷದಲ್ಲಿ ಮೂರು ಮನೆ ಬದಲಿಸಿದ್ದೇಕೆ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್!?

ನವೆಂಬರ್ 3, 2024 - 15:59
 0  35
ಕಳೆದ ಒಂದೇ ವರ್ಷದಲ್ಲಿ ಮೂರು ಮನೆ ಬದಲಿಸಿದ್ದೇಕೆ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್!?

‘ಮಠ’, ‘ಎದ್ದೇಳು ಮಂಜುನಾಥ’ ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಸಾಲ ಕೊಟ್ಟವರು ಮನೆ ಬಳಿ ಬರುತ್ತಾರೆಂದು ಪದೇ ಪದೇ ಗುರುಪ್ರಸಾದ್ ಮನೆ ಖಾಲಿ ಮಾಡುತ್ತಿದ್ದರು. 

ಬಸವೇಶ್ವರನಗರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಗುರುಪ್ರಸಾದ್ ನಂತರ ಜಯನಗರ ಕನಕನಪಾಳ್ಯದ ಅಶೋಕ್ ಪಿಲ್ಲರ್ ಬಳಿ ವಾಸವಿದ್ದರು. ಕೆಲದಿನಗಳ ಕಾಲ ಮನೆ ಬಿಟ್ಟು ಒಬ್ಬಂಟಿಯಾಗಿ ಹೋಟೆಲಿನಲ್ಲಿ ಗುರುಪ್ರಸಾದ್‌ ರೂಂ ಮಾಡಿಕೊಂಡಿದ್ದರು. ಸದ್ಯ ಕಳೆದ ಕೆಲ ತಿಂಗಳುಗಳಿಂದ ಮಾದನಾಯಕನಹಳ್ಳಿ ಬಳಿಯ ನ್ಯೂ ಹೆವೆನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಮಾದನಾಯಕನಹಳ್ಳಿ ಬಳಿಯ ಫ್ಲಾಟ್ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿಯನ್ನು ಗುರುಪ್ರಸಾದ್‌ ನೀಡಿರಲಿಲ್ಲ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಗುರುಪ್ರಸಾದ್‌ ಕೋರ್ಟ್‌, ಕಚೇರಿ ಅಲೆಯುತ್ತಿದ್ದರು. ಈ ನಡುವೆ ಜಯನಗರದಲ್ಲಿ ಪುಸ್ತಕ ಖರೀದಿ ಮಾಡಿ ಹಣ ನೀಡಿಲ್ಲ ಎಂಬ ಆರೋಪದ ಅಡಿ ಮತ್ತೊಂದು ಕೇಸ್ ದಾಖಲಾಗಿತ್ತು. ಹೀಗಾಗಿ ಆರ್ಥಿಕವಾಗಿ ಒಂದಷ್ಟು ಸಮಸ್ಯೆಯನ್ನು ಗುರುಪ್ರಸಾದ್ ಎದುರಿಸುತ್ತಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow