ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು NDA: ಪ್ರಹ್ಲಾದ್ ಜೋಶಿ ಭವಿಷ್ಯ

ನವೆಂಬರ್ 9, 2024 - 16:01
 0  13
ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು NDA: ಪ್ರಹ್ಲಾದ್ ಜೋಶಿ ಭವಿಷ್ಯ

ಹುಬ್ಬಳ್ಳಿ: ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರದ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶತಾಯ ಗತಾಯ ಉಪ ಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ. ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow