ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಮಾಜಿ ಸಚಿವ ಹೆಚ್ಎಂ ರೇವಣ್ಣ ಹಲ್ಲೆ ಆರೋಪ! ದೂರು ದಾಖಲು

ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಮಾಜಿ ಸಚಿವ ಹೆಚ್ಎಂ ರೇವಣ್ಣ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಮಧ್ಯಾಹ್ನ 3:30ರ ಸುಮಾರಿಗೆ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ನಾನು ಹೋಗಿದ್ದೆ. ಮಾತಾಡುವಾಗ ನನ್ನ ಮೊಬೈಲ್ ಕಸಿದುಕೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ರೇವಣ್ಣ ಮಹಿಳೆಯ ಮೊಬೈಲ್ ಕಸಿದುಕೊಳ್ಳುತ್ತಿರುವ ವಿಡಿಯೋ ಕೂಡ ಇದೀಗ ವೈರಲ್ ಆಗ್ತಿದೆ.
ಇನ್ನೂ ಈ ಸಂಬಂಧ ಹೆಚ್ಎಂ ರೇವಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






