ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

ಫೆಬ್ರವರಿ 5, 2025 - 14:00
 0  18
ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಬಹಳಷ್ಟು ಲಿಂಗಾಯತ ನಾಯಕರನ್ನು ಮುಗಿಸಿದ್ದಾರೆ. ಬಸವರಾಜ್ ಪಾಟೀಲ್ ಸೇಡಂ, ಬಿ.ವಿ ಶಿವಪ್ಪ, ಸಿದ್ದೇಶ್ವರ್, ಮಲ್ಲಿಕಾರ್ಜುನಯ್ಯ, ಜೊತೆಗೆ ನನ್ನನ್ನು ಸತತವಾಗಿ ಮುಗಿಸುವ ಪ್ರಯತ್ನ ಮಾಡಿದರು,.

 ರಮೇಶ್ ಜಾರಕಿಹೊಳಿ ರಸ್ತೆಗೆ ಬರಲು ಬಿಡಲ್ಲ ಅಂತಾರೆ. ಏನು ಗೂಂಡಾಗಿರಿ ಮಾಡ್ತಿದ್ದಾರಾ? ಮೂರು ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ ಮಾಡಬೇಕು. ಹಿಂದೂಗಳ ಹತ್ಯೆ ಆಯಿತು ಬಿಎಸ್ವೈ ಏನಾದರೂ ಮಾಡಿದ್ರಾ? ಶಿವಮೊಗ್ಗದಲ್ಲಿ ಔರಂಗಜೇಬನ ಫೋಟೋ ಹಾಕಿದ್ದಾಗ ಏನು ಮಾಡಿದ್ರು? ಜಮೀರ್ ಅಹಮದ್ ಖಾನ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಮ್ಮ ತಂಡದಲ್ಲಿ ಕುಟುಂಬ ರಾಜಕೀಯ ಇಲ್ಲ.

ಸಿದ್ದೇಶ್ವರ್, ಲಿಂಬಾವಳಿ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಅವರ ಮನೆಯವರು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ. ಅದು ಡಿಕೆಶಿ ಅವರ ಆಶೀರ್ವಾದದಿಂದ ಆಗಿದ್ದಾರೆ. ಮೊದಲ ಬಾರಿ ಶಾಸಕರಾಗಿ ರಾಜ್ಯಾಧ್ಯಕ್ಷರಾಗಿದ್ದಾರೆ. ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರರಿಂದ ಸರ್ಕಾರ ಬಂತು, ಜಾರಕಿಹೊಳಿ ಪಕ್ಷ ಗಟ್ಟಿ ಮಾಡಲು ಬಂದವರು, ವಿಜಯೇಂದ್ರ ಮಾಡಿದ್ದೇನು? ನಕಲಿ ಸಹಿ ಮಾಡಿ ಭ್ರಷ್ಟಾಚಾರ ಮಾಡಿದರು. ಶ್ರೀರಾಮುಲು ನಿಮ್ಮ ಜೊತೆಗಿದ್ದೇನೆ ಎಂದು ಹೇಳಿದ್ದಾರೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow