ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ: ಅರವಿಂದ ಬೆಲ್ಲದ

ಡಿಸೆಂಬರ್ 15, 2024 - 22:03
ಡಿಸೆಂಬರ್ 14, 2024 - 17:18
 0  13
ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ: ಅರವಿಂದ ಬೆಲ್ಲದ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ. ಸಂವಿಧಾನದ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ. ಅದರ ಬಗ್ಗೆ ಇವರು ಮಾತನಾಡುವುದಿಲ್ಲ.

ಸಿಎಂ ಪ್ರಕಾರ ಮುಸ್ಲಿಮರು ಬಿಟ್ಟು ಬೇರೆ ಯಾರು ಏನು ಕೇಳಬಾರದು, ಏನೇ ಕೇಳಿದರೂ ಮುಸ್ಲಿಮರಷ್ಟೇ ಕೇಳಬೇಕು. ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ. ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿಎಂ ಸಿದ್ದರಾಮಯ್ಯನವರದ್ದು. ನಮ್ಮ ಸರ್ಕಾರ ಇದ್ದಾಗ ಇದಕ್ಕಿಂತ ಬಹಳ ಜನ ಕೂಡಿದ್ದರು. ಆವಾಗ ನಮ್ಮ ಸಿಎಂ ಮತ್ತು ಸಚಿವರು ಸೇರಿ ಒಂದು ಪರಿಹಾರ ಕಂಡುಹಿಡಿಯಲು ಮುಂದಾಗಿದ್ವಿ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow