ಕಾನೂನು ಮೂಲಕ ಮೈಕ್ರೋಫೈನಾನ್ಸ್ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಾನೂನು ಮೂಲಕ ಮೈಕ್ರೋಫೈನಾನ್ಸ್ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಸ್ವರೂಪ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಅಂತಿಮಗೊಳಿಸಿ ನಂತರ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ. ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ.
ಜನರಿಗೆ ಕಿರುಕುಳ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ, ಆತ್ಮಹತ್ಯೆ, ಊರು ಬಿಡುವ ಘಟನೆಗಳು ಆಗುತ್ತಿವೆ. ಇದು ನಿಲ್ಲಬೇಕು, ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೂ ಕಡಿವಾಣ ಹಾಕಬೇಕು. ನಮ್ಮ ಊರಿನಲ್ಲಿ ಎರಡೂವರೆ ಲಕ್ಷ ಕೊಟ್ಟು ನಾಲ್ಕೂವರೆ ಲಕ್ಷ ವಸೂಲು ಮಾಡಿದ್ದಾರೆ" ಎಂದು ಹೇಳಿದರು.
ಆ ಮನೆಯವರು ಮನೆ ಬಿಟ್ಟು ಹೋಗಿದ್ದಾರೆ. ಇದು ನನ್ನ ಗಮನಕ್ಕೆ ಬಂದು ಸ್ಥಳಕ್ಕೆ ಅಧಿಕಾರಿಗಳನ್ನು ಕಳಿಸಿದ್ದೆ. ಈಗ ಆ ಮನೆಯವರು ಬಂದಿದ್ದಾರೆ. ನಾನೀಗ ಅಲ್ಲಿಗೇ ಹೋಗುತ್ತಿದ್ದೇನೆ. ಕಾನೂನು ಮೂಲಕ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ. ನಾವು ತರುವ ಕಾನೂನನ್ನು ಕೋರ್ಟಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಪ್ರಶ್ನೆ ಮಾಡದಂತೆ ರೂಪಿಸುತ್ತೇವೆ. ಬೇರೆ ರಾಜ್ಯಗಳ ಕಾನೂನು ಅಧ್ಯಯನ ಮಾಡಿ ಹೊಸ ಕಾನೂನು ತರುತ್ತೇವೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






