ಕಾಲ್ತುಳಿತ ಪ್ರಕರಣ: 14 ದಿನಗಳ ಕಾಲ ಅಲ್ಲು ಅರ್ಜುನ್ʼಗೆ ನ್ಯಾಯಾಂಗ ಬಂಧನ

ಡಿಸೆಂಬರ್ 13, 2024 - 16:47
 0  12
ಕಾಲ್ತುಳಿತ ಪ್ರಕರಣ: 14 ದಿನಗಳ ಕಾಲ ಅಲ್ಲು ಅರ್ಜುನ್ʼಗೆ ನ್ಯಾಯಾಂಗ ಬಂಧನ

ಹೈದರಾಬಾದ್:  ಚಿತ್ರರಂಗದಲ್ಲಿ ಸಖತ್​ ಸದ್ದು ಮಾಡಿರುವ 'ಪುಷ್ಪಾ-2 ದಿ ರೂಲ್'​ ಪ್ರೀಮಿಯರ್​ ಶೋ ವೇಳೆ ದುರಂತ ಸಂಭವಿಸಿತ್ತು. ಜನಸಂದಣಿಯಿಂದಾಗಿ ಮಹಿಳಾ ಅಭಿಮಾನಿ ರೇವತಿ (35) ಎಂಬುವವರು ಸಾವನ್ನಪ್ಪಿದ್ದರು. ಕಾಲ್ತುಳಿತದಲ್ಲಿ 13 ವರ್ಷ ವಯಸ್ಸಿನ ಮಗ ಶ್ರೀ ತೇಜ್​ ತೀವ್ರವಾಗಿ ಗಾಯಗೊಂಡಿದ್ದರು. ಸದ್ಯ ಚಿಕಿತ್ಸೆ ಮುಂದುವರೆದಿದೆ. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್‌ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್‌ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ.

ಡಿ. 4 ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್ ಈ ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

 

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow