ಕಾಲ್ತುಳಿತ ಸಂಭವಿಸಿ 11 ಸಾವು ಪ್ರಕರಣ: ಸಂತಾಪ ಸೂಚಿಸಿದ ವಿಜಯ್ ಮಲ್ಯ

ಜೂನ್ 5, 2025 - 11:07
 0  12
ಕಾಲ್ತುಳಿತ ಸಂಭವಿಸಿ 11 ಸಾವು ಪ್ರಕರಣ: ಸಂತಾಪ ಸೂಚಿಸಿದ ವಿಜಯ್ ಮಲ್ಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ X ಮಾಡಿರುವ ವಿಜಯ್ ಮಲ್ಯ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ.

 ಐಪಿಎಲ್ ಚಾಂಪಿಯನ್ವಿಜಯೋತ್ಸವ ಆಚರಿಸಲು ಬಂದಿದ್ದ ಆರ್ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow