ಕಾಶ್ಮೀರ ನಮ್ಮದು, ಪಾಕ್ ಮೇಲೆ ದಾಳಿಯ ಅಗತ್ಯವಿಲ್ಲ: ವಿಜಯ್ ದೇವರಕೊಂಡ!

ಎಪ್ರಿಲ್ 28, 2025 - 20:01
 0  10
ಕಾಶ್ಮೀರ ನಮ್ಮದು, ಪಾಕ್ ಮೇಲೆ ದಾಳಿಯ ಅಗತ್ಯವಿಲ್ಲ:  ವಿಜಯ್ ದೇವರಕೊಂಡ!

ಕಾಶ್ಮೀರ ನಮ್ಮದು, ಪಾಕ್ ಮೇಲೆ ದಾಳಿಯ ಅಗತ್ಯವಿಲ್ಲ ಎಂದು ನಟ  ವಿಜಯ್ ದೇವರಕೊಂಡ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ 26 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಈ ಕುರಿತು ಹಲವು ನಟ, ನಟಿಯರು ಖಂಡಿಸಿದ್ದಾರೆ. ಅದರಂತೆ ವಿಜಯ್ ದೇವರಕೊಂಡ ಮಾತನಾಡಿ, ಉಗ್ರರ ದಾಳಿಗೆ ಅಮಾಯಕರ ಪ್ರಾಣಪಕ್ಷಿ ಹಾರಿ ಹೋಗಿದೆ. ಮತ್ತೆ ಇಂಥಹ ಕೃತ್ಯ ಮರುಕಳಿಸಬಾರದು ಅಂದರೆ ಶತ್ರುಗಳ ಬಾಲ ಕಟ್ ಮಾಡಲೇಬೇಕು. ಅದಕ್ಕಾಗಿ ಭಾರತೀಯ ಸೈನ್ಯ ಉಗ್ರರನ್ನು ಪತ್ತೆ ಮಾಡುತ್ತಿದ್ದಾರೆ. ಕಾಶ್ಮೀರ ಎಂದೆಂದಿಗೂ ಭಾರತಕ್ಕೆ ಸೇರಿದ್ದು, ಭಾರತೀಯರಿಗೆ ಮಾತ್ರವೇ ಸೇರಿದ್ದು ಅನ್ನೋದು ಸತ್ಯ ಎಂದಿದ್ದಾರೆ. 

ಭಯೋತ್ಪಾದಕರಿಗೆ ಶಿಕ್ಷಣವಿಲ್ಲ. ಅವರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲದ ಕಾರಣ ಅವರ ಸಮಸ್ಯೆಗಳನ್ನು ಅವರಿಗೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಿದ್ದರೂ ಕಾಶ್ಮೀರದ ಮೇಲೆ ಉದ್ಧಟತನ ಮಾಡ್ತಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವ ಅವಶ್ಯಕತೆ ಇಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಲ್ಲಿನ ಜನರೇ ಅಲ್ಲಿನ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಎಂದಿದ್ದಾರೆ. ನಾನು 2 ವರ್ಷಗಳ ಹಿಂದೆ ಕಾಶ್ಮೀರಕ್ಕೆ ‘ಖುಷಿ’ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಿದ್ದೆ, ತುಂಬಾ ಒಳ್ಳೆಯ ಸಮಯವನ್ನು ನಾನಲ್ಲಿ ಕಳೆದಿದ್ದೇನೆ ಎಂದು ವಿಜಯ್‌ ದೇವರಕೊಂಡ ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow