ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಗ್ಧರ ಸಾವಿಗೆ ಮಿಡಿದ ರಾಜ್ ಕುಟುಂಬ.. ಬರ್ತಡೇ ಸೆಲೆಬ್ರೇಟ್ ಮಾಡಲು ಯುವ ನಿರಾಕರಣೆ!

ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದಕ್ಕೆ ನಟ ಯುವ ರಾಜ್ಕುಮಾರ್ ಬರ್ತಡೇ ಸೆಲೆಬ್ರೇಟ್ ಬ್ರೇಕ್ ಮಾಡಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಿತ್ರತಂಡ ಟೀಸರ್ ಬಿಡುಗಡೆಯನ್ನು ಮುಂದೂಡಿಕೆ ಮಾಡಿದೆ. ಬೆಳಗ್ಗೆ ಬಿಡುಗಡೆ ಆಗಬೇಕಿದ್ದ ಟೀಸರ್ ಇಂದು ಸಂಜೆ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಕಾರ್ತಿಕ್ ಗೌಡ ಅವರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾತಾಡಿದ ನಟ ಯುವ ರಾಜ್ಕುಮಾರ್, ಉಗ್ರರಿಗೆ ತಕ್ಕ ಶಿಕ್ಷೆ ಆಗ್ಬೇಕು. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದಿರೋ ದಾಳಿ ಖಂಡನೀಯ. ಈ ರೀತಿ ಮುಗ್ಧ ಜನರ ಕೊಲ್ಲೋದು ಸರಿಯಲ್ಲ. ದಾಳಿ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ ಆಗ್ಬೇಕು. ಮತ್ತೆ ಮತ್ತೆ ಈ ರೀತಿಯ ದಾಳಿ ಆಗ್ತಿದ್ದು, ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು. ಕಾಶ್ಮೀರದಲ್ಲಿ ಯುವ ಸಾಂಗ್ ಶೂಟ್ ಆಗಿತ್ತು. ಯುವ ಸಿನಿಮಾದ ಒಂದು ಹಾಡನ್ನು ನಾವು ಲಡಾಕ್ನಲ್ಲಿ ಚಿತ್ರೀಕರಣ ನಡೆಸಿದ್ವಿ. ಅಲ್ಲಿ ದಾಳಿಯ ಯಾವುದೇ ಅನುಭವ ಆಗಿರಲಿಲ್ಲ. ಅಲ್ಲಿ ಸೇನೆಯ ರಕ್ಷಣೆಯಿತ್ತು ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






