ಕುಂಭಮೇಳದಲ್ಲಿ ಭಾಗಿ ಆದರೆ ತಪ್ಪೇನಿದೆ? ನೀರಿಗೆ ಏನಾದರೂ ಜಾತಿ, ಧರ್ಮ ಇದೆಯಾ.?: ಡಿ.ಕೆ.ಶಿವಕುಮಾರ್ ಪ್ರಶ್ನೆ

ಕುಂಭಮೇಳದಲ್ಲಿ ಭಾಗಿ ಆದರೆ ತಪ್ಪೇನಿದೆ? ನೀರಿಗೆ ಏನಾದರೂ ಜಾತಿ, ಧರ್ಮ ಇದೆಯಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಕುಂಭಮೇಳಕ್ಕೆ ಹೋಗಿದ್ದೆ. ಅಲ್ಲಿ ನೀರಿಗೆ ಏನಾದರೂ ಜಾತಿ, ಧರ್ಮ ಇದೆಯಾ? ನೀರಿಗೆ ಏನಾದರೂ ಪಾರ್ಟಿ ಇದೆಯಾ? ತಿ.ನರಸೀಪುರದ ಕುಂಭಮೇಳದಲ್ಲೂ ನಾನು ಭಾಗಿಯಾಗಿದ್ದೇನೆ. ಕುಂಭಮೇಳದಲ್ಲಿ ಭಾಗಿ ಆದರೆ ತಪ್ಪೇನಿದೆ? ಯಾರು ಯಾವ ಲೆಕ್ಕಚಾರ ಬೇಕಾದರೂ ಹಾಕಿಕೊಳ್ಳಲಿ, ಅವಶ್ಯಕತೆ ಇಲ್ಲ. ಯಾವ ಲೆಕ್ಕಾಚಾರನೂ ಅವಶ್ಯಕತೆ ಇಲ್ಲ ಎಂದು ಕುಂಭಮೇಳ ವಿರೋಧಿಗಳಿಗೆ ತಿರುಗೇಟು ನೀಡಿದರು.
ನಾನು ಯಾವ ದೇವಸ್ಥಾನಕ್ಕೆ ಹೋದರೂ, ಯಾವ ಧಾರ್ಮಿಕ ವಿಚಾರ ಮಾತನಾಡಿದರೂ ಸಂಚಲನವಾಗುತ್ತದೆ. ನಿಮ್ಮ ಜಿಲ್ಲೆಯವರೇ ನನ್ನನ್ನು ಏಸು ಕುಮಾರ ಎಂದು ಕರೆದಿದ್ದರು. ಯೇಸುವಿನ ಶಿಲಾಮೂರ್ತಿಗೆ ನಾನು ಪ್ರೋತ್ಸಾಹ ಕೊಟ್ಟೆ ಎಂಬ ಕಾರಣಕ್ಕೆ ಹೀಗೆ ಹೇಳಿದ್ದರು. ಯಾರೋ ಒಬ್ಬ ಎಂಪಿ ಮುಸ್ಲಿಮರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಎಂದಿದ್ದ.
ಬರಿ ಪಂಚರ್ ಹಾಕೋಕೆ ಲಾಯಕ್ಕು ಎಂದಿದ್ದ. ಅವರೆಲ್ಲ ನಮ್ಮ ಬ್ರದರ್ಸ್, ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ. ಚಿಕನ್ನು ಮಟನ್ನು ನಾವು ಕಡಿಯೋಕೆ ಆಗುತ್ತಾ? ಅವರೇ ಕಡಿಯುವವರು. ಯಾವ ಕೆಲಸ ಯಾರು ಮಾಡಬೇಕು ಅವರೇ ಮಾಡುತ್ತಾರೆ. ಅವರನ್ನು ಬ್ರದರ್ಸ್ ಅಂದಿದ್ದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ನಿಮ್ಮ ಪ್ರತಿಕ್ರಿಯೆ ಏನು?






