ಕುಡಿದ ಮತ್ತಲ್ಲಿ ಹೆಂಡ್ತಿಗೆ ಗುಂಡು ಹಾರಿಸಿದ ಗಂಡ: ಬಳಿಕ ಮನನೊಂದು ಆ್ಯಸಿಡ್ ಸೇವಿಸಿ ಸೂಸೈಡ್!

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಪತ್ನಿಯ ಗುಂಡಿಕ್ಕಿ ಹತ್ಯೆ ಮಾಡಿ ಆ್ಯಸಿಡ್ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಕುಡಿದ ಅಮಲಿನಲ್ಲಿ ಈ ಕೃತ್ಯ ಎಸಗಿರಬಹುದು ಎಂದು ತಿಳಿದು ಬಂದಿದೆ
ರಾಮಚಂದ್ರಗೌಡ ಮತ್ತು ಅವರ ಪತ್ನಿ ವಿನೋದಾ ಕುಮಾರಿ ಮೃತರು. ನಿತ್ಯ ಕುಡಿದು ಬಂದು ಪತ್ನಿ ಜೊತೆ ರಾಮಚಂದ್ರ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ ಕೂಡ ಪತ್ನಿ ವಿನೋದಾ, ಪತಿ ರಾಮಚಂದ್ರ ನಡುವೆ ಗಲಾಟೆ ಆಗಿದೆ. ಜಗಳ ಬಿಡಿಸಲು ಬಂದ ಮಗ ಪ್ರಶಾಂತ್ನಿಗೆ ಫೈರಿಂಗ್ ಮಾಡಲು ರಾಮಚಂದ್ರ ಯತ್ನಿಸಿದ್ದಾನೆ. ಮಗನಿಗೆ ಶೂಟ್ ಮಾಡುವಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಕುಮಾರಿ ಮೃತಪಟ್ಟಿದ್ದಾರೆ.
ಇದಾದ ನಂತರ ಪತ್ನಿಯ ಸಾವಿನಿಂದ ಮನನೊಂದ ರಾಮಚಂದ್ರ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






