ಕೊನೆಗೂ ನಕ್ಸಲ್ ಮುಕ್ತಿ ಆಯ್ತು ಕರ್ನಾಟಕ! ಉಳಿದವನೂ ಅಂದರ್!

ಫೆಬ್ರವರಿ 1, 2025 - 17:05
 0  10
ಕೊನೆಗೂ ನಕ್ಸಲ್ ಮುಕ್ತಿ ಆಯ್ತು ಕರ್ನಾಟಕ! ಉಳಿದವನೂ ಅಂದರ್!

ಚಿಕ್ಕಮಗಳೂರು:- ಕಳೆದ‌ 18 ವರ್ಷಗಳಿಂದ ಭೂಗತರಾಗಿದ್ದ ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್​​ ಕೂಡ ​ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ. 

ನಕ್ಸಲ್​ ರವೀಂದ್ರ, ಎಸ್​ಪಿ ವಿಕ್ರಮ್ ಆಮ್ಟೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌‌ ಮುಂದೆ ಶರಣಾಗಿದ್ದಾರೆ. ನಕ್ಸಲ್​ ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ 7 ಲಕ್ಷ ರೂ. ಪ್ಯಾಕೇಜ್ ಹಣ ಘೋಷಣೆ ಮಾಡಿದೆ.

ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ ಕಳೆದ‌ 18 ವರ್ಷಗಳಿಂದ ನಕ್ಸಲ್​​ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್​ರ ನಾಯಕ ವಿಕ್ರಮ್ ಗೌಡ ಎನ್​ಕೌಂಟರ್​ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ರವೀಂದ್ರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹರಸಾಹಸ ಪಟ್ಟಿತ್ತು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಒಪ್ಪಿ ರವಿಂದ್ರ ಶರಣಾಗಿದ್ದಾರೆ.

ನಕ್ಸಲ್​ ರವೀಂದ್ರ ಒಟ್ಟು 26 ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ನಕ್ಸಲ್​ ರವೀಂದ್ರ ವಿರುದ್ಧ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಕೇಸ್ ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 14 ಪ್ರಕರಣಗಳು ದಾಖಲಾಗಿವೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow