ಕೊನೆಗೂ ಬಳ್ಳಾರಿ ಜೈಲಿಗೆ ಬಂದ ಮೀನಾ ತೂಗುದೀಪ! ತಾಯಿಯನ್ನು ಅಪ್ಪಿಕೊಂಡು ಕಣ್ಣೀರಿಟ್ಟ ದರ್ಶನ್

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ರನ್ನು ನೋಡಲು ತಾಯಿ ಮೀನಾ ತೂಗುದೀಪ ಒಮ್ಮೆಯೂ ಮಗನನ್ನು ನೋಡಲು ಬಳ್ಳಾರಿ ಜೈಲಿಗೆ ಹೋಗಿರಲಲ್ಲ. ಇದರಿಂದ ಬೇಸರಗೊಂಡಿದ್ದ ದರ್ಶನ್ ತಾಯಿಯನ್ನು ನೋಡಬೇಕು ಎಂದು ಹಂಬಲಿಸಿದ್ದರು. ಇದೀಗ ಮಗನನ್ನು ನೋಡಲು ತಾಯಿ ಮೀನಾ ತೂಗುದೀಪ ಮಗಳ ಜೊತೆ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.
ದರ್ಶನ್ ತಾಯಿ, ಸಹೋದರಿ ದಿವ್ಯಾ, ಬಾವ ಮಂಜುನಾಥ ಹಾಗೂ ಅಕ್ಕನ ಮಕ್ಕಳು ಆಗಮಿಸಿ ದರ್ಶನ್ ಕುಶಲೋಪರಿ ವಿಚಾರಿಸಿದ್ದಾರೆ. ದರ್ಶನ್ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್ರನ್ನು ಭೇಟಿ ಮಾಡಿದ್ದಾರೆ.
ಸಂದರ್ಶಕರ ಕೊಠಡಿಯಲ್ಲಿರುವ ತಾಯಿ ಮೀನಾ ದರ್ಶನ್ ಅಕ್ಕ, ಮಾವ, ಹಾಗೂ ಅಕ್ಕನ ಮಕ್ಕಳು ಇದ್ದರು. ಸಂದರ್ಶಕರ ಕೊಠಡಿಗೆ ಬಂದ ನಟ ದರ್ಶನ್ ತಾಯಿಯ ಕಂಡು ಅಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ಮಗನ ಸ್ಥಿತಿ ನೆನೆದು ಕಣ್ಣೀರು ಹಾಕಿದ ತಾಯಿ ಮೀನಾ ತೂಗುದೀಪ ಅವರು ಮಗನಿಗೆ ಸಾಂತ್ವನಿಸಿದ್ದಾರೆ ಎಂದು ಹೇಳಲಾಗಿದೆ. ಸಹೋದರನ ಸ್ಥಿತಿ ಕಂಡು ದರ್ಶನ್ ಅಕ್ಕ ಕೂಡಾ ಭಾವುಕರಾಗಿದ್ದಾರೆ ಎನ್ನಲಾಗಿದೆ. ದರ್ಶನ್ ಗೆ ಧೈರ್ಯ ತುಂಬಿದ ಅಕ್ಕ, ಭಾವ ಅವರೊಂದಿಗೆ ಮಾತನಾಡಿದ್ದಾರೆ. ಪುತ್ರ ದರ್ಶನ್ ಗೆ ತಾಯಿ ಮೀನಾ ತೂಗುದೀಪ ಅವರು ಮಾನಸಿಕ ಧೈರ್ಯ ತುಂಬಿದ್ದಾರೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






