ಕೊಹ್ಲಿಯನ್ನು ಟೀಕಿಸುವ ಮೊದಲು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ: ಮಾಜಿ ಸಂಸದೆ ಸುಮಲತಾ ಕಿಡಿ

ಜೂನ್ 4 ರಂದು ಆರ್ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ.
ಇನ್ನು ಪ್ರಕರಣದ ತನಿಖೆಯನ್ನು ನಿವೃತ್ತ ಜಸ್ಟೀಸ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದೆ. ಇನ್ನು ಕಾಲ್ತುಳಿತ ಪ್ರಕರಣ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಶಕ್ತಿ ಸರವಣನ್ ಅವರ ಫೇಸ್ಬುಕ್ನಲ್ಲಿನ ಪೋಸ್ಟ್ ಅನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆಂದು ತಿಳಿಸಿದ್ದಾರೆ.
ಒಂದು ದುರಂತ ಘಟನೆಯನ್ನು ಬಳಸಿಕೊಂಡು ವಿರಾಟ್ ಕೊಹ್ಲಿ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಲು ಪ್ರಯತ್ನಿಸುತ್ತಿರುವ ಎಲ್ಲಾ ಮೂರ್ಖರಿಗೆ ಎಂದು ಸಂಸದೆ ಕಟುವಾದ ಸಂದೇಶ ರವಾನಿಸಿದ್ದಾರೆ. ಕೊಹ್ಲಿಯನ್ನು ಟೀಕಿಸುವ ಮೊದಲು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ಸಾರ್ವಜನಿಕ ಸುರಕ್ಷತೆಯ ಏಕೈಕ ಜವಾಬ್ದಾರಿ ರಾಜ್ಯ ಸರ್ಕಾರ ಮತ್ತು ಆಡಳಿತದ ಮೇಲಿದೆ. ಪರಿಸ್ಥಿತಿ ನಿಭಾಯಿಸುವಲ್ಲಿ ಅವರು ವಿಫಲರಾಗಿದ್ದಾರೆ.
ಈ ದುರಂತಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಬದಲಾಗಿ ಅವರ ಅಪರಾಧವನ್ನು ಮರೆಮಾಚುವ ಪ್ರಯತ್ನದಲ್ಲಿ ಬೇರೆಯವರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ 11 ಅಮಾಯಕರ ಜೀವಗಳು ಬಲಿಯಾಗಿವೆ. ಮೃತರಿಗೆ ನ್ಯಾಯ ಸಿಗಬೇಕಾದರೆ, ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಬೇಕು. ಇದಕ್ಕಾಗಿ ಕಠಿಣ ಶಿಕ್ಷೆ ವಿಧಿಸಬೇಕು.ಒಂದು ತಂಡ ಅಥವಾ ಆಟಗಾರರ ಮೇಲೆ ಆರೋಪ ಹೊರಿಸುವುದು ನಿಮ್ಮ ಅಜ್ಞಾನ ಅಥವಾ ಸಣ್ಣತನವನ್ನು ತೋರಿಸುತ್ತದೆ ಎಂದು ಸಂಸದೆ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






