ಕೋರ್ಟ್ʼನಿಂದ ಅನುಮತಿ ತಗೊಂಡು ದೇವರನ್ನ ಪೂಜಿಸೋದು ನಾಚಿಕೆಗೇಡಿನ ಸಂಗತಿ: ಪ್ರಮೋದ್ ಮುತಾಲಿಕ್

ಕಲಬುರಗಿ: ನೀವು ಬಾಯಿ ಮುಚ್ಚಿಕೊಂಡು ಕೂತರೆ ನಿಮ್ಮ ಮಠ ಹೋಗುವುದು ಗ್ಯಾರಂಟಿ ಎಂದುಮಠಾಧೀಶರ ವಿರುದ್ದ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ನ್ಯಾಯಾಲಯದ ನಿರ್ದೇಶನದಂತೆ ಪೂಜೆ ಮುಗಿಸಿ ಮುಂದಿನ ಹೋರಾಟ ಮಾಡುತ್ತೇವೆ. ಬರುವ ಯುಗಾದಿಗೆ ಆಂದೋಲಾ ಸ್ವಾಮೀಜಿ ನೇತೃತ್ವದಲ್ಲಿ ಮತ್ತೆ ಪೂಜೆ ಮಾಡುತ್ತೇವೆ.
ಸದ್ಯ ಈ ವಿಚಾರ ಜೀವಂತವಾಗಿ ಇಟ್ಟಿದ್ದೇವೆ. ಇದನ್ನೂ ನಾವು ಕೈ ಬಿಟ್ಟರೆ ಅದು ವಕ್ಫ್ ಬೋರ್ಡ್ದೇ ಆಗಿ ಬಿಡುತ್ತೆ. ಸಾವಿರಾರು ವರ್ಷಗಳಿಂದ ಪೂಜೆ ನಡೆಯುತ್ತಿರುವ ದೇವರಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ಪಡೆಯಬೇಕು ಎನ್ನುವುದೇ ನಾಚಿಕೆಗೇಡಿನ ಸಂಗತಿ,
ಶ್ರೀರಾಮ ಸೇನೆ, RSS, ವಿಶ್ವ ಹಿಂದೂ ಪರಿಷತ್ ಸೇರಿ ಕೆಲವರು ಬಿಟ್ಟರೆ ಉಳಿದವರು ಯಾಕೆ ಬಾಯಿ ಮುಚ್ಚಿ ಕುಳಿತಿದ್ದಾರೋ? ಉಳಿದ ಸ್ವಾಮೀಜಿಗಳೇ ನೀವೇನು ನಿದ್ದೆ ಮಾಡುತ್ತಿದ್ದೀರಾ? ನಿಮ್ಮ ಮಠದ ಒಳಗಡೆ ಇರುವ ಲಿಂಗಕ್ಕೂ ನಾಳೆ ಮಲಮೂತ್ರ ಎರಚುತ್ತಾರೆ.
ಸ್ವಾಮಿಜಿಗಳೇ, ನೀವು ಕಣ್ಣು ತೆರೆಯಿರಿ, ಆಂದೋಲಾ ಸ್ವಾಮೀಜಿಗಳನ್ನು ಬ್ಯಾನ್ ಮಾಡಿದ್ದಾರೆ. ಆದರೂ ಒಬ್ಬ ಸ್ವಾಮಿಯೂ ತುಟಿ ಪಿಟಕ್ ಎನ್ನುತ್ತಿಲ್ಲ. ನರಸತ್ತವರ ರೀತಿ ವರ್ತನೆ ಮಾಡಬೇಡಿ ಮಠಾಧಿಪತಿಗಳೇ. ಇಂತ್ತು ಆಳಂದನಲ್ಲಿ, ನಾಳೆ ನಿಮ್ಮಲ್ಲಿ ಇದೇ ಆಟ ನಡೆಯುತ್ತೆ. ನೀವು ಬಾಯಿ ಮುಚ್ಚಿಕೊಂಡು ಕೂತರೆ ನಿಮ್ಮ ಮಠ ಹೋಗುವುದು ಗ್ಯಾರಂಟಿ ಎಂದು ಕಿಡಿಕಾರಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






