ಕ್ರಾಂತಿವೀರ ಬ್ರಿಗೇಡ್ʼನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ: ಕೆಎಸ್ ಈಶ್ವರಪ್ಪ

ಡಿಸೆಂಬರ್ 16, 2024 - 18:09
ಡಿಸೆಂಬರ್ 16, 2024 - 18:10
 0  10
ಕ್ರಾಂತಿವೀರ ಬ್ರಿಗೇಡ್ʼನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ: ಕೆಎಸ್ ಈಶ್ವರಪ್ಪ

ಹುಬ್ಬಳ್ಳಿ: ಕ್ರಾಂತವೀರ ಬ್ರಿಗೇಡ್​​ನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿವಿ ಸದಾನಂದಗೌಡ ಮತ್ತು ಬಸವರಾಜ್​ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಹಣ ಬಿಡುಗಡೆ ಮಾಡಿದ್ದರು. ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಣ್ಣ ಮಠಗಳಿವೆ. ಕ್ರಾಂತವೀರ ಬ್ರಿಗೇಡ್​​ನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ.

ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ. ಮಠಾಧೀಶರು ಬ್ರಿಗೇಡ್ ಆರಂಭ ಮಾಡತ್ತಿದ್ದಾರೆ ಎಂದು ಹೇಳಿದರು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡಿದಾಗ ಕೆಲವರು ಹೈಕಮಾಂಡ ನಾಯಕರಿಗೆ ದೂರು ಕೊಟ್ಟರು. ಕೆಲವರು ರಾಣಿ ಚೆನ್ನಮ್ಮ ಬ್ರಿಗೇಡ್ ಎಂದು ಹೇಳಿದರು. ಮೀಸಲಾತಿ ವಿಚಾರವಾಗಿ ನಾವು ಮಾತಾಡಲ್ಲ. ನಾನು ಮೀಸಲಾತಿ ಪರವೂ ಅಲ್ಲ, ವಿರೋಧವೂ ಅಲ್ಲ. ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow