ಗೃಹಲಕ್ಚ್ಮಿ ಹಣದಲ್ಲಿ ಮಂಡ್ಯ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಗಿಫ್ಟ್ ಕೊಟ್ಟ ಮಹಿಳೆ..!

ಮಂಡ್ಯ: ಗೃಹಲಕ್ಷ್ಮೀ ಹಣದಿಂದ ಕೆಲ ಮಹಿಳೆಯರಯ ಟಿವಿ, ಫ್ರಿಜ್ ತೆಗೆದುಕೊಂಡಿದ್ದು ಸುದ್ದಿಯಾಗಿದ್ದರು. ಇತ್ತೀಚೆಗೆ ಉತ್ತರ ಕರ್ನಾಟಕದ ಮಹಿಳೆಯೊಬ್ಬಳು ಇಡೀ ಊರಿಗೆ ಹೋಳಿಗೆ ಊಟವನ್ನೂ ಹಾಕಿಸಿದ್ದರು. ಕೆಲ ದಿನಗಳ ಹಿಂದೆ ಮಗನಿಗೆ ಬೈಕ್ಅನ್ನು ಗೃಹಲಕ್ಷ್ಮೀ ಹಣದಲ್ಲಿ ಖರೀದಿ ಮಾಡಿದ್ದರು.ಆದರೆ ಇಲ್ಲೊಬ್ಬ ಮಹಿಳೆ ಗೃಹಲಕ್ಷ್ಮಿ ಹಣದಲ್ಲಿ ತಮ್ಮೂರ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಕೊಡಿಸಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ಗೃಹಿಣಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಇದುವರೆಗೂ ಬಂದಿದ್ದ ಗೃಹಲಕ್ಷ್ಮಿ ಹಣ ಮೊತ್ತದ ಜೊತೆ ಇನ್ನು ಸ್ಪಲ್ಪ ಹಣ ಕೂಡಿಸಿ 50 ಸಾವಿರ ರೂ ಮೌಲ್ಯದ ಫಿಲ್ಟರ್ನ್ನು ಕೊಡುಗೆಯಾಗಿ ನೀಡಿದ್ದಾರೆ.
ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶುದ್ಧ ಕುಡಿಯುವ ನೀರಿಲ್ಲದೇ ಪರಿತಪಿಸುತ್ತಿದ್ದರು. ಮಕ್ಕಳ ಸಂಕಷ್ಟ ನೋಡಿ, ಅವರಿಗೆ ಏನಾದರೂ ಮಾಡಬೇಕೆಂದು ನಿರ್ಧರಿಸಿದ ವಿಜಯಲಕ್ಷ್ಮೀ ಅವರು, ವಾಟರ್ ಫಿಲ್ಟರನ್ನು ಕೊಡುಗೆಯಾಗಿ ನೀಡಿದ್ದಾರೆ.
ಪತ್ನಿಯ ಸಾಮಾಜಿಕ ಕಾರ್ಯಕ್ಕೆ ಪತಿ ರಂಗನಾಥನ್ ಅವರೂ ಕೈ ಜೋಡಿಸಿದ್ದಾರೆ. ಹೆಚ್ಚುವರಿ ಹಣ ನೀಡಿ, ಫಿಲ್ಟರ್ ಕೊಳ್ಳಲು ಪತಿ ರಂಗನಾಥನ್ ಸಹಕರಿಸಿದ್ದಾರೆ. ಪತಿ ಪತ್ನಿಯ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಸರ್ಕಾರಿ ಶಿಕ್ಷಕರು ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






