ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಮನೆಗೆ 28 ಸಾವಿರ ರೂ. ವೆಚ್ಚದ ಬಾಗಿಲು ನಿರ್ಮಾಣ!

ಸೆಪ್ಟೆಂಬರ್ 19, 2025 - 11:59
 0  21
ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಮನೆಗೆ 28 ಸಾವಿರ ರೂ. ವೆಚ್ಚದ ಬಾಗಿಲು ನಿರ್ಮಾಣ!

ವಿಜಯನಗರ: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಸಾಕಷ್ಟು ನೆರವಾಗುತ್ತಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಕೋಟ್ಯಂತರ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ.

ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಸಿದ್ದಾರೆ.  ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow