ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಬೈಕ್ ಕೊಡಿಸಿದ ತಾಯಿ! ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

ಬೆಳಗಾವಿ: ಸಾಕಷ್ಟು ಮಹಿಳೆಯರು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಿಂದ ಬಂಗಾರ, ಫ್ರಿಜ್, ಟಿವಿ ಇನ್ನು ಹತ್ತು ಹಲವಾರು ವಸ್ತುಗಳನ್ನು ಖರೀದಿಸಿದ್ದಾರೆ. ಇದರ ಬೆನ್ನಲ್ಲೇ ಗೃಹಲಕ್ಷ್ಮಿ ಹಣ ಕೂಡಿಟ್ಟ ತಾಯಿ ಮಗನಿಗೆ ಹೊಸ ಬೈಕ್ ಕೊಡಿಸಿದ್ದಾರೆ. ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಮಗನಿಗೆ ದಸರಾ ಉಡುಗೊರೆ ಕೊಟ್ಟಿದ್ದಾರೆ. ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ಇಂದು ದ್ವಿಚಕ್ರ ವಾಹನ ಕೊಡಿಸಿದ್ದಾರೆ.
ಬಾಗವ್ವ ತನ್ನ ಮಗ ಹೊಸ ಬೈಕ್ ಖರೀದಿಸಲು ಮುಂಗಡ ಹಣವನ್ನು ನೀಡಿದ್ದಾರೆ. ಇಂದು ಹೊಸ ಬೈಕ್ಗೆ ಬಾಗವ್ವ ಪೂಜೆ ಸಲ್ಲಿಸಿ, ಬೈಕ್ ಕೀಯನ್ನು ಮಗನಿಗೆ ಹಸ್ತಾಂತರ ಮಾಡಿದ್ದಾರೆ. ಗೃಹಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿರೋ ಸುದ್ದಿ ಕೇಳಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಬಾಗವ್ವ ಸಣ್ಣಕ್ಕಿ ಅವರಿಗೆ ಪತ್ರ ಬರೆದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ತಮ್ಮ ಮಗನಾದ ರಮೇಶ್ ನೀಲಪ್ಪ ಸಣ್ಣಕ್ಕಿ ಅವರಿಗೆ ಬೈಕ್ ವಾಹನ ಖರೀದಿಸಲು ಮುಂಗಾಡ ಹಣವನ್ನು ತಾವು(ಬಾಗವ್ವ) ನೀಡಿರುವು ವಿಷಯ ಕೇಳಿ ಇಲಾಖೆಯ ಮಂತ್ರಿಯಾದ ನನಗೆ ಅತೀವ ಖುಷಿ ತಂದಿದೆ. ಗೃಹಲಕ್ಷ್ಮಿ ಯೋಜನಯಿಂದ ರಾಜ್ಯದ ಮಹಿಳೆಯರು ಸಾವಲಂಬಿ ಜೀವನ ನಡೆಸುವುದರ ಜೊತೆಯಲ್ಲಿ ಮನೆಯ ಪುರಷರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿರುವುದು ನಿಜಕ್ಕೂ ಮಹುಳೆಯರ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ.
ವಿಜಯದಶಮಿ ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ. ಈ ಯೋಜನೆ ರೂವಾರಿಗಳಾದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಲೆ ತಮ್ಮ ಪ್ರೀತಿ ವಿಶ್ವಾಸ ಹೀಗೆ ಮುಂದುವರೆಲೆಂದು ಬಯಸುತ್ತಾ, ತಮಗೆ ಈ ಮೂಲಕ ಹೊಸ ವಾಹನ ಖರೀಸುತ್ತಿರುವ ಶುಭ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಬಾಗವ್ವಗೆ ಪತ್ರ ಬರೆದಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






