ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ಗೆ ಹೆಚ್ಚಾಯ್ತು ಸಂಕಷ್ಟ - ಇಂದು ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆಜಿಗಟ್ಟಲೇ ಚಿನ್ನವನ್ನ ಮೈಮೇಲೆ ಹೊತ್ತು ತಂದಿದ್ದ ರನ್ಯಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಸೆರೆವಾಸದಲ್ಲಿ ಇರುವಾಗ್ಲೇ ರನ್ಯಾ ಜಾಮೀನಿಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇನ್ನೂ ದುಬೈನಿಂದ ಕೋಟಿ ಕೋಟಿ ಬೆಲೆಬಾಳುವ ಚಿನ್ನ ತಂದು ಡಿಆರ್ಐ ಅಧಿಕಾರಿಗಳಿಗೆ ಲಾಕ್ ಆಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ, ಆರ್ಥಿಕ ಅಪರಾಧದ ವಿಶೇಷ ನ್ಯಾಯಾಲದಲ್ಲಿ ವಾದ-ಪ್ರತಿವಾದ ನಡೆಸಲಾಗಿದ್ದು, ಜಾಮೀನು ಆದೇಶ ಇಂದಿಗೆ ಕಾಯ್ದಿರಿಸಲಾಗಿದೆ.
ಇಂದು ಮಧ್ಯಾಹ್ನದ ನಂತರ ನಟಿಯ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿ ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಾಡಿದ್ದು, ಡಿಆರ್ಐ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಹೆಣ್ಣು ಎಂದೂ ನೋಡದೆ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ. ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ನನ್ನ ಕಕ್ಷಿದಾರೆಯ ಪಾತ್ರ ಇಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಆದರೆ, ಡಿಆರ್ಐ ಪರ ವಕೀಲ ಮಧುರಾವ್ ಪ್ರಾಥಮಿಕ ತನಿಖೆಯ ವೇಳೆ ಆರೋಪಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಮಾಡಿರುವುದು ಕಂಡುಬಂದಿದೆ. ಚಿನ್ನವನ್ನ ಕೂಡ ವಶಕ್ಕೆ ಪಡೆದುಕೊಂಡು ತನಿಖೆ ಮಾಡಲಾಗುತ್ತಿದೆ. ಮನೆ ಶೋಧ ಕಾರ್ಯದ ವೇಳೆ ಕೋಟಿ ಕೋಟಿ ಹಣ ಹಾಗೂ ಚಿನ್ನಭರಣಗಳು ಪತ್ತೆ ಆಗಿವೆ. ಒಂದು ದೊಡ್ಡ ಸಿಂಡಿಕೇಟ್ ಕೆಲಸ ಮಾಡುತ್ತಿರುವ ಬಗ್ಗೆ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






