ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು.
ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ. ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ವಲಯ ಐಜಿಪಿ, ಎಸ್ಪಿಯವರಿಗೆ ಸೂಚಿಸಿದ್ದೇನೆ. ಬಸ್ ನಿರ್ವಾಹಕನ ಮೇಲೆ ಯಾತಕ್ಕಾಗಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಪರಿಶೀಲಿಸಿ ವರದಿ ನೀಡುವಂತೆ ಹೇಳಿದ್ದೇನೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






