ಚನ್ನಪಟ್ಟಣ ಉಪಚುನಾವಣೆ: ನಾಮಪತ್ರಕ್ಕೂ ಮುನ್ನ ನಿಖಿಲ್ ಟೆಂಪಲ್ ರನ್..!

ಅಕ್ಟೋಬರ್ 25, 2024 - 12:03
 0  10
ಚನ್ನಪಟ್ಟಣ ಉಪಚುನಾವಣೆ: ನಾಮಪತ್ರಕ್ಕೂ ಮುನ್ನ ನಿಖಿಲ್ ಟೆಂಪಲ್ ರನ್..!

ಬೆಂಗಳೂರು: ಇಂದು ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಗಿ ನಿಖಿಲ್ ಕುಮಾರಸ್ವಾಮಿ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.  ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಹೌದು ಕೆಂಗಲ್ ಆಂಜನೇಯ ದೇವಾಲಯ ಮತ್ತು ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೇವರಲ್ಲಿ ಒಳ್ಳೆಯ ಪ್ರಾರ್ಥನೆ ಮಾಡಿದ್ದೇನೆ. ತಾತ ದೇವೇಗೌಡರು, ತಂದೆ ಕುಮಾರಣ್ಣ, ಪತ್ನಿ ರೇವತಿ ಜೊತೆಗೂಡಿ ಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow