ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಭರ್ಜರಿ ಗೆಲುವು!

ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು ಈ ಪೈಕಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್ 25,357 ಮತಗಳಿಂದ ಗೆಲುವು ದಾಖಲಿಸಿದ್ದಾರೆ. 20 ಸುತ್ತುಗಳ ಮತ ಎಣಿಕೆಯ ನಂತರ ಯೋಗೇಶ್ವರ್ 1,12,388 ಮತಗಳನ್ನು ಪಡೆದರೆ ನಿಖಿಲ್ ಕುಮಾರಸ್ವಾಮಿ 87,031 ಮತಗಳನ್ನು ಪಡೆದರು.
ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಿಪಿವೈಗೆ ಈ ಬಾರೀ ದೇವೆಗೌಡರ ಕುಟುಂಬದ ಕೊನೆಯ ಕುಡಿ ನಿಖಿಲ್ ಎದುರಾಳಿಯಾಗಿದ್ದರು. ಇವರಿಬ್ಬರ ನಡುವೆ ನೇರ ಹಣಾಹಣಿಯಿದ್ದರು ಸಹ. ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿಗೆ ಈ ಚುನಾವಣೆ ಪ್ರತಿಷ್ಟೆಯ ಕಣವಾಗಿತ್ತು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






