ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದವಿದೆ, ನಾವು ಗೆದ್ದೇ ಗೆಲ್ಲುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ

ಮೈಸೂರು: ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದವಿದೆ, ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಜಮೀರ್ ಅಹ್ಮದ್ರನ್ನು ಎಂದೂ ಕುಳ್ಳ ಎಂದು ಕರೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ತಾಯಿ ಚಾಮುಂಡೇಶ್ವರಿ ಮುಂದೆ ನಿಂತಿದ್ದೇನೆ ಸತ್ಯವನ್ನೇ ಹೇಳುತ್ತಿದ್ದೇನೆ ಎಂದರು.
ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದವಿದೆ, ಉತ್ತಮವಾದ ರೀತಿಯಲ್ಲಿ ಗೆಲುವು ಸಾಧಿಸುತ್ತೇವೆ. ಜಮೀರ್ ಹೇಳಿಕೆಯಿಂದ ಯಾವ ವ್ಯತ್ಯಾಸವೂ ಆಗುವುದಿಲ್ಲ, ನಾವು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಬೀಳಿಸಲು 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿ, ಸಿಎಂ ಹೇಳಿಕೆ ಬಫೂನ್ ರೀತಿ ಇದೆ. 50 ಕೋಟಿ 50 ಜನರಿಗೆ ಅಂಥ ನಿಖರವಾಗಿ ಹೇಳುತ್ತಿದ್ದಾರೆ. ಈ ಸರ್ಕಾರ ಪ್ರತಿಯೊಂದಕ್ಕೂ ಎಸ್ಐಟಿ ತನಿಖೆ ಮಾಡಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ನಿಮ್ಮ ಪ್ರತಿಕ್ರಿಯೆ ಏನು?






