ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಗದ್ದಲ: ವಿಧಾನಸಭೆ ಕಲಾಪ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ

ಡಿಸೆಂಬರ್ 9, 2024 - 13:59
 0  16
ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಗದ್ದಲ: ವಿಧಾನಸಭೆ ಕಲಾಪ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ಆರಂಭವಾದ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆಗಳೂ ಶುರುವಾಗಿವೆ. ಸುವರ್ಣಸೌಧದದ ಹೊರಗಡೆ 11 ವಿವಿಧ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿವೆ. ಹೌದು ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ (ಡಿಸೆಂಬರ್​ 09) ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಡಿಸೆಂಬರ್​​ 20ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಗೆ ಶಿಪ್ಟ್ ಆಗಿದೆ. ಈ ಬಾರಿ ದುಂದುವೆಚ್ಚ ಮಾಡದಂತೆ ಅಚ್ಚುಕಟ್ಟಾಗಿ ಅಧಿವೇಶನ ಮಾಡಲು ಕಳೆದ ಎರಡು ವಾರದಿಂದ ಬೆಳಗಾವಿ ಜಿಲ್ಲಾಡಳಿತ ಸಾಕಷ್ಟು ತಯಾರಿ ಮಾಡಿಕೊಂಡಿದೆ.

ಬೆಳಗಾವಿಯಲ್ಲಿ ಅಧಿವೇಶನದ ಹೊತ್ತಲ್ಲೇ ಮತ್ತೆ ಪಂಚಮಸಾಲಿ ಸಮುದಾಕ್ಕೆ 2A ಮೀಸಲಾತಿಗಾಗಿ ರಣಕಹಳೆ ಮೊಳಗಿಸಲಾಗಿದೆ. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು.

 ಇದರ ಮದ್ಯೆ ಚಳಿಗಾಲದ ಅಧಿವೇಶನವನ್ನು ಮಧ್ಯಾಹ್ನ 2.30 ಗಂಟೆಗೆ ಮುಂದೂಡಲಾಗಿದೆ. ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ಕಲಾಪವನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದ್ದಾರೆ.ವಕ್ಪ್ ವಿಚಾರದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಆಗ್ರಹಿಸಿದ್ದು, ಸ್ಪೀಕರ್ ಮಧ್ಯಾಹ್ನ 2:30 ಕ್ಕೆ ಕಲಾಪ ಮುಂದೂಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow