ಚಾಂಪಿಯನ್ಸ್ ಟ್ರೋಫಿ: ಸ್ಟಾರ್ ಆಲ್ರೌಂಡರ್ ಗೆ ಚಾನ್ಸ್ ಸಿಗೋದು ಡೌಟ್!?

ಮುಂಬರುವ ಚಾಂಪಿಯನ್ಸ್ ಟ್ರೋಫಿ ಶುರುವಾಗಲು ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ತಂಡಗಳು ಭರ್ಜರಿ ಸಿದ್ಧತೆ ಕೈಗೊಂಡಿದೆ.
ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.
2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.
ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.
ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವ ಅಥವಾ ಟೆಸ್ಟ್ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






