ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: ಸಿರಾಜ್ ಗೆ ಸಿಗುತ್ತಾ ವೈಲ್ಡ್ ಕಾರ್ಡ್ ಎಂಟ್ರಿ?

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಮೂಲಕ ಸಿರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಜಸ್ಪ್ರೀತ್ ಬುಮ್ರಾ ಅವರ ಲಭ್ಯತೆ ಇನ್ನೂ ಸಹ ಖಚಿತವಾಗಿಲ್ಲ. ಬೆನ್ನು ನೋವಿನ ಸಮಸ್ಯೆಗೆ ಸಿಲುಕಿರುವ ಅವರ ವೈದ್ಯಕೀಯ ವರದಿ ನ್ಯೂಝಿಲೆಂಡ್ ಡಾಕ್ಟರ್ಸ್ಗೆ ಕಳುಹಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಿದ ಬಳಿಕ ಬುಮ್ರಾ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ.
ಒಂದು ವೇಳೆ ನ್ಯೂಝಿಲೆಂಡ್ ವೈದ್ಯಕೀಯ ವರದಿಯಲ್ಲಿ ಬುಮ್ರಾ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಬೇಕೆಂದು ಸೂಚಿಸಿದರೆ, ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡುವುದು ಖಚಿತ. ಅಲ್ಲದೆ ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ
ಈಗಾಗಲೇ ಜಸ್ಪ್ರೀತ್ ಬುಮ್ರಾಗೆ ಬ್ಯಾಕ್ ಅಪ್ ಆಟಗಾರನನ್ನು ಸಿದ್ಧಪಡಿಸಲು ಸೂಚಿಸಲಾಗಿದ್ದು, ಬುಮ್ರಾ 100% ಫಿಟ್ ಆಗದಿದ್ದರೆ ಮೊಹಮ್ಮದ್ ಸಿರಾಜ್ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಕಳುಹಿಸಲು ಆಯ್ಕೆ ಸಮಿತಿ ಚಿಂತಿಸಿದೆ ಎಂದು ವರದಿಯಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






