ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ದುಬೈಗೆ ಶಿಫ್ಟ್! ಪಾಕಿಸ್ತಾನಕ್ಕೆ ಮುಖಭಂಗ; ಫೈನಲ್ ನಲ್ಲಿ ಗೆಲ್ಲುತ್ತಾ ಭಾರತ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಅತ್ಯುತ್ತಮ ಪ್ರದರ್ಶನ ತೋರಿದ್ದು, ಅಜೇಯವಾಗಿ ಉಳಿದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರವಾಗಿ ಮೊದಲಿನಿಂದಲೂ ಭಾರತದ ವಿರುದ್ಧ ಕಾಲು ಕೆರೆಯುತ್ತಿದ್ದ ಪಾಕಿಸ್ತಾನಕ್ಕೆ ತಕ್ಕಶಾಸ್ತಿಯಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿ ಫೈನಲ್ ನಲ್ಲಿ ಭಾರತ ತಂಡವನ್ನು ಗೆಲ್ಲಿಸುವ ಮೂಲಕ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟಿದ್ದು, ಆಸ್ಟ್ರೇಲಿಯಾ ಸೋಲಿನೊಂದಿಗೆ ಟೂರ್ನಿಯ ಫೈನಲ್ ಪಂದ್ಯ ಇದೀಗ ದುಬೈಗೆ ಸ್ಥಳಾಂತರವಾಗಿದೆ.
ಬರೊಬ್ಬರಿ 2 ದಶಕಗಳ ಬಳಿಕ ತನ್ನ ದೇಶದಲ್ಲಿ ಐಸಿಸಿ ಟೂರ್ನಿ ಆಯೋಜಿಸಿತ್ತು. ಆದರೆ ಭಾರತ ಸರ್ಕಾರ ಮತ್ತು ಬಿಸಿಸಿಐ ನಿಲುವಿನಿಂದಾಗಿ ಪಾಕಿಸ್ತಾನದಲ್ಲಿ ಆಯೋಜಿಸಬೇಕಿದ್ದ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹೈಬ್ರಿಡ್ ಮಾದರಿಗೆ ಬದಲಾಯಿತು.
ಅದರಂತೆ ದುಬೈ ಮತ್ತು ಪಾಕಿಸ್ತಾನದ ಕ್ರೀಡಾಂಗಣಗಳಲ್ಲಿ ಟೂರ್ನಿ ಆಯೋಜನೆಯಾಯಿತು. ಆದರೆ ಟೂರ್ನಿ ಆರಂಭವಾದ ಐದೇ ದಿನಗಳಲ್ಲಿ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರಬಿದಿತ್ತು. ಭಾರತದ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ಸೋತು ಟೂರ್ನಿಯಿಂದಲೇ ಹೊರಬಿತ್ತು. ಇದೀಗ ಆಸ್ಟ್ರೇಲಿಯಾದ ವಿರುದ್ಧ ಭಾರತ ಜಯ ಗಳಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯೇ ಪಾಕಿಸ್ತಾನದಿಂದ ಹೊರಹೋಗುವಂತೆ ಮಾಡಿದೆ.
ಭಾನುವಾರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದ್ದು, ಗೆಲುವು ಯಾರದ್ದು ಎಂದು ಕಾದು ನೋಡಬೇಕಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






