ಚೆನ್ನೈ ಸೂಪರ್ ಕಿಂಗ್ಸ್ʼಗೆ ಮತ್ತೊಂದು ಸೋಲು: CSK ನಾಯಕ ಎಂಎಸ್ ಧೋನಿ ಹೇಳಿದ್ದೇನು..?

ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ಗೆ ಮತ್ತೊಂದು ಸೋಲಾಗಿದೆ. ನಿನ್ನೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲುವ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ಹೀನಾಯ ಸೋಲಿನಿಂದ ಸಿಎಸ್ಕೆ ನಾಯಕ ಎಂಎಸ್ ಧೋನಿ ತುಂಬಾ ನಿರಾಶೆಗೊಂಡಂತೆ ಕಂಡುಬಂದರು. ಯಾಕೆಂದರೆ ಧೋನಿ ಕೂಡ ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ಒದಗಿಸಲು ಸಾಧ್ಯವಾಗಿಲ್ಲ. ಇದರಿಂದಾಗಿ ತಂಡವು ಸಾಕಷ್ಟು ನಷ್ಟ ಅನುಭವಿಸಿದೆ.
ತಂಡದ ಸೋಲಿನ ನಂತರ, ನಾಯಕ ಧೋನಿ ಬೇಸರ ವ್ಯಕ್ತಪಡಿಸಿ, ತಮ್ಮ ತಂಡ ನಿರಂತರವಾಗಿ ವಿಕೆಟ್ಗಳನ್ನು ಕಳೆದುಕೊಳ್ಳುತ್ತಲೇ ಇತ್ತು, ಇದರಿಂದಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಯಿತು ಎಂದು ಹೇಳಿದರು. ಮೊದಲ ಇನ್ನಿಂಗ್ಸ್ ಪಿಚ್ ಉತ್ತಮವಾಗಿದೆ ಎಂದು ನಾಯಕ ಬಣ್ಣಿಸಿದರೂ,
ಚೆಂಡು ಹೆಚ್ಚು ತಿರುವು ಪಡೆಯುತ್ತಿರಲಿಲ್ಲವಾದ್ದರಿಂದ ಆ ಪಿಚ್ನಲ್ಲಿ 155 ರನ್ಗಳ ಸ್ಕೋರ್ ಸಮರ್ಥನೀಯವಲ್ಲ ಎಂದು ಒಪ್ಪಿಕೊಂಡರು. ‘ಹೌದು, 8 ರಿಂದ 10 ಓವರ್ಗಳ ನಂತರ ಪಿಚ್ ವೇಗದ ಬೌಲರ್ಗಳಿಗೆ ಸ್ವಲ್ಪ ಭಿನ್ನವಾಯಿತು, ಆದರೆ ನಾವು ನಮ್ಮ ಖಾತೆಗೆ ಇನ್ನೂ ಕೆಲವು ರನ್ಗಳನ್ನು ಸೇರಿಸಬೇಕಾಗಿತ್ತು’ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






